ಮುಂದಿನ ಮೂರು ವರ್ಷಗಳಿಗೆ ಅನ್ವಯವಾಗುವಂತೆ ವಿದ್ಯುತ್ ದರವನ್ನು ಪರಿಷ್ಕರಿಸಲು ಎಲ್ಲ ಎಸ್ಕಾಂಗಳು ಸಿದ್ಧತೆ ನಡೆಸುತ್ತಿರುವುದಾಗಿ ವರದಿಯಾಗಿದೆ.
ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ಜನಸಾಮಾನ್ಯರಿಗೆ ತೊಂದರೆ ಕೊಡುವ ಬದಲು ವಿದ್ಯುತ್ ಬಿಲ್ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ದೊಡ್ಡ ದೊಡ್ಡ ಕಂಪೆನಿಗಳು ಹಾಗೂ ವಾಣಿಜ್ಯ ಸಂಕೀರ್ಣಗಳ ಮೊತ್ತವನ್ನು ವಸೂಲಾತಿ ಮಾಡಲು ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬಹುದಲ್ಲವೇ? ಈಗಾಗಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರ ಜೀವನ ಅಸ್ತವ್ಯಸ್ತಗೊಂಡಿದೆ.
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಬೆಲೆ ಏರಿಕೆ ನೀತಿಯನ್ನು ಅನುಸರಿಸುತ್ತಿರುವುದು ಅದಕ್ಕೆ ಜನವಿರೋಧಿ ಸರ್ಕಾರ ಎಂಬ ಪಟ್ಟ ಬರುವಂತೆ ಮಾಡಿದೆ. ಬಡಕುಟುಂಬಗಳ ಅನುಕೂಲಕ್ಕಾಗಿ ಪ್ರತಿ ಮನೆಯ ಯಜಮಾನಿಗೆ ಮಾಸಿಕ ೨,೦೦೦ ರೂ. ನೀಡುತ್ತಿದೆ. ಆದರೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಅದೇ ಹಣವನ್ನು ವಸೂಲಿ ಮಾಡುತ್ತಿದೆಯೇನೋ ಅನಿಸುತ್ತದೆ.
ಇನ್ನು ಸಾಕಷ್ಟು ಕಡೆ ವಿದ್ಯುತ್ ಕಳ್ಳತನವಾಗುತ್ತಿದೆ. ಅನೇಕ ಕಡೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡಿದ್ದಾರೆ. ಇಲಾಖೆ ಇಂತಹವುಗಳಿಗೆ ಮೊದಲು ಕಡಿವಾಣ ಹಾಕಬೇಕು. ಅಲ್ಲದೆ ಕೆಲ ರಾಜಕಾರಣಿಗಳು, ಅಽಕಾರಿಗಳು, ಸರ್ಕಾರಿ ಕಚೇರಿಗಳಲ್ಲಿ ಲಕ್ಷಾಂತರ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದಾರೆ. ಮೊದಲು ಆ ಬಾಕಿ ಇರುವ ಹಣವನ್ನು ವಸೂಲಿ ಮಾಡಲಿ ನಂತರ ದರ ಏರಿಕೆಯ ಬಗ್ಗೆ ಚಿಂತಿಸಲಿ.
-ಎ. ಎಸ್. ಗೋಪಾಲಕೃಷ್ಣ, ರಾಮಕೃಷ್ಣ ನಗರ, ಮೈಸೂರು
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…