ಮುಂದಿನ ಮೂರು ವರ್ಷಗಳಿಗೆ ಅನ್ವಯವಾಗುವಂತೆ ವಿದ್ಯುತ್ ದರವನ್ನು ಪರಿಷ್ಕರಿಸಲು ಎಲ್ಲ ಎಸ್ಕಾಂಗಳು ಸಿದ್ಧತೆ ನಡೆಸುತ್ತಿರುವುದಾಗಿ ವರದಿಯಾಗಿದೆ.
ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ಜನಸಾಮಾನ್ಯರಿಗೆ ತೊಂದರೆ ಕೊಡುವ ಬದಲು ವಿದ್ಯುತ್ ಬಿಲ್ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ದೊಡ್ಡ ದೊಡ್ಡ ಕಂಪೆನಿಗಳು ಹಾಗೂ ವಾಣಿಜ್ಯ ಸಂಕೀರ್ಣಗಳ ಮೊತ್ತವನ್ನು ವಸೂಲಾತಿ ಮಾಡಲು ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬಹುದಲ್ಲವೇ? ಈಗಾಗಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರ ಜೀವನ ಅಸ್ತವ್ಯಸ್ತಗೊಂಡಿದೆ.
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಬೆಲೆ ಏರಿಕೆ ನೀತಿಯನ್ನು ಅನುಸರಿಸುತ್ತಿರುವುದು ಅದಕ್ಕೆ ಜನವಿರೋಧಿ ಸರ್ಕಾರ ಎಂಬ ಪಟ್ಟ ಬರುವಂತೆ ಮಾಡಿದೆ. ಬಡಕುಟುಂಬಗಳ ಅನುಕೂಲಕ್ಕಾಗಿ ಪ್ರತಿ ಮನೆಯ ಯಜಮಾನಿಗೆ ಮಾಸಿಕ ೨,೦೦೦ ರೂ. ನೀಡುತ್ತಿದೆ. ಆದರೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಅದೇ ಹಣವನ್ನು ವಸೂಲಿ ಮಾಡುತ್ತಿದೆಯೇನೋ ಅನಿಸುತ್ತದೆ.
ಇನ್ನು ಸಾಕಷ್ಟು ಕಡೆ ವಿದ್ಯುತ್ ಕಳ್ಳತನವಾಗುತ್ತಿದೆ. ಅನೇಕ ಕಡೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡಿದ್ದಾರೆ. ಇಲಾಖೆ ಇಂತಹವುಗಳಿಗೆ ಮೊದಲು ಕಡಿವಾಣ ಹಾಕಬೇಕು. ಅಲ್ಲದೆ ಕೆಲ ರಾಜಕಾರಣಿಗಳು, ಅಽಕಾರಿಗಳು, ಸರ್ಕಾರಿ ಕಚೇರಿಗಳಲ್ಲಿ ಲಕ್ಷಾಂತರ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದಾರೆ. ಮೊದಲು ಆ ಬಾಕಿ ಇರುವ ಹಣವನ್ನು ವಸೂಲಿ ಮಾಡಲಿ ನಂತರ ದರ ಏರಿಕೆಯ ಬಗ್ಗೆ ಚಿಂತಿಸಲಿ.
-ಎ. ಎಸ್. ಗೋಪಾಲಕೃಷ್ಣ, ರಾಮಕೃಷ್ಣ ನಗರ, ಮೈಸೂರು
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…