ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸ್ಥಳೀಯ ಭಾಷೆ ತಿಳಿದವರನ್ನು ನೇಮಕ ಮಾಡಿಕೊಳ್ಳುವಂತೆ ವಿತ್ತ ಸಚಿವರು ಬ್ಯಾಂಕುಗಳಿಗೆ ಸೂಚಿಸಿದ್ದು, ಈ ನಿಟ್ಟಿನಲ್ಲಿ ನೀತಿ ನಿಯಮಾವಳಿಗಳನ್ನು ತಿದ್ದುಪಡಿ ಮಾಡಿಕೊಳ್ಳುವಂತೆ ಆದೇಶಿಸಿದ್ದಾರೆ. ದಿನ ನಿತ್ಯದ ಬ್ಯಾಂಕ್ ವ್ಯವಹಾರಗಳಲ್ಲಿ ಭಾಷಾ ಸಂಘರ್ಷ ಉಂಟಾಗುವುದನ್ನು ಗಮನಿಸಿರುವ ಅವರು, ಈ ಸೂಚನೆ ಕೊಟ್ಟದ್ದಾರೆ ಎನ್ನಲಾಗುತ್ತದೆ. ಭಾಷಾ ಭಿನ್ನತೆಯಿಂದಾಗಿ ಬ್ಯಾಂಕ್ ಶಾಖೆಗಳಲ್ಲಿ ಸಿಬ್ಬಂದಿ ಜತೆ ಗ್ರಾಹಕರ ಸಂಪರ್ಕ ಕಡಿಮೆಯಾಗಿ, ಸಾಲ ನೀಡುವಾಗ ಬ್ಯಾಂಕ್ ಗ್ರಾಹಕರ ಬಗ್ಗೆ ತಿಳಿದುಕೊಳ್ಳಲು ಹೊರಗಿನ ಏಜೆನ್ಸಿಯನ್ನು ಅವಲಂಬಿಸ ಬೇಕಾಗಿರುವುದನ್ನು ಅವರು ಉಲ್ಲೇಖಿಸಿದ್ದಾರೆ. ಸ್ವಲ್ಪ ವಿಳಂಬವಾದರೂ ವಿತ್ತ ಸಚಿವರು ಬ್ಯಾಂಕುಗಳಲ್ಲಿ ಉದ್ಭವಿಸಿರುವ ಭಾಷಾ ಸಮಸ್ಯೆಯನ್ನು ಅರ್ಥಮಾಡಿ ಕೊಂಡಿರುವುದು ಒಳ್ಳೆಯ ಬೆಳವಣಿಗೆ.
-ರಮಾನಂದ ಶರ್ಮಾ, ಬೆಂಗಳೂರು
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…