ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸ್ಥಳೀಯ ಭಾಷೆ ತಿಳಿದವರನ್ನು ನೇಮಕ ಮಾಡಿಕೊಳ್ಳುವಂತೆ ವಿತ್ತ ಸಚಿವರು ಬ್ಯಾಂಕುಗಳಿಗೆ ಸೂಚಿಸಿದ್ದು, ಈ ನಿಟ್ಟಿನಲ್ಲಿ ನೀತಿ ನಿಯಮಾವಳಿಗಳನ್ನು ತಿದ್ದುಪಡಿ ಮಾಡಿಕೊಳ್ಳುವಂತೆ ಆದೇಶಿಸಿದ್ದಾರೆ. ದಿನ ನಿತ್ಯದ ಬ್ಯಾಂಕ್ ವ್ಯವಹಾರಗಳಲ್ಲಿ ಭಾಷಾ ಸಂಘರ್ಷ ಉಂಟಾಗುವುದನ್ನು ಗಮನಿಸಿರುವ ಅವರು, ಈ ಸೂಚನೆ ಕೊಟ್ಟದ್ದಾರೆ ಎನ್ನಲಾಗುತ್ತದೆ. ಭಾಷಾ ಭಿನ್ನತೆಯಿಂದಾಗಿ ಬ್ಯಾಂಕ್ ಶಾಖೆಗಳಲ್ಲಿ ಸಿಬ್ಬಂದಿ ಜತೆ ಗ್ರಾಹಕರ ಸಂಪರ್ಕ ಕಡಿಮೆಯಾಗಿ, ಸಾಲ ನೀಡುವಾಗ ಬ್ಯಾಂಕ್ ಗ್ರಾಹಕರ ಬಗ್ಗೆ ತಿಳಿದುಕೊಳ್ಳಲು ಹೊರಗಿನ ಏಜೆನ್ಸಿಯನ್ನು ಅವಲಂಬಿಸ ಬೇಕಾಗಿರುವುದನ್ನು ಅವರು ಉಲ್ಲೇಖಿಸಿದ್ದಾರೆ. ಸ್ವಲ್ಪ ವಿಳಂಬವಾದರೂ ವಿತ್ತ ಸಚಿವರು ಬ್ಯಾಂಕುಗಳಲ್ಲಿ ಉದ್ಭವಿಸಿರುವ ಭಾಷಾ ಸಮಸ್ಯೆಯನ್ನು ಅರ್ಥಮಾಡಿ ಕೊಂಡಿರುವುದು ಒಳ್ಳೆಯ ಬೆಳವಣಿಗೆ.
-ರಮಾನಂದ ಶರ್ಮಾ, ಬೆಂಗಳೂರು
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…