ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸ್ಥಳೀಯ ಭಾಷೆ ತಿಳಿದವರನ್ನು ನೇಮಕ ಮಾಡಿಕೊಳ್ಳುವಂತೆ ವಿತ್ತ ಸಚಿವರು ಬ್ಯಾಂಕುಗಳಿಗೆ ಸೂಚಿಸಿದ್ದು, ಈ ನಿಟ್ಟಿನಲ್ಲಿ ನೀತಿ ನಿಯಮಾವಳಿಗಳನ್ನು ತಿದ್ದುಪಡಿ ಮಾಡಿಕೊಳ್ಳುವಂತೆ ಆದೇಶಿಸಿದ್ದಾರೆ. ದಿನ ನಿತ್ಯದ ಬ್ಯಾಂಕ್ ವ್ಯವಹಾರಗಳಲ್ಲಿ ಭಾಷಾ ಸಂಘರ್ಷ ಉಂಟಾಗುವುದನ್ನು ಗಮನಿಸಿರುವ ಅವರು, ಈ ಸೂಚನೆ ಕೊಟ್ಟದ್ದಾರೆ ಎನ್ನಲಾಗುತ್ತದೆ. ಭಾಷಾ ಭಿನ್ನತೆಯಿಂದಾಗಿ ಬ್ಯಾಂಕ್ ಶಾಖೆಗಳಲ್ಲಿ ಸಿಬ್ಬಂದಿ ಜತೆ ಗ್ರಾಹಕರ ಸಂಪರ್ಕ ಕಡಿಮೆಯಾಗಿ, ಸಾಲ ನೀಡುವಾಗ ಬ್ಯಾಂಕ್ ಗ್ರಾಹಕರ ಬಗ್ಗೆ ತಿಳಿದುಕೊಳ್ಳಲು ಹೊರಗಿನ ಏಜೆನ್ಸಿಯನ್ನು ಅವಲಂಬಿಸ ಬೇಕಾಗಿರುವುದನ್ನು ಅವರು ಉಲ್ಲೇಖಿಸಿದ್ದಾರೆ. ಸ್ವಲ್ಪ ವಿಳಂಬವಾದರೂ ವಿತ್ತ ಸಚಿವರು ಬ್ಯಾಂಕುಗಳಲ್ಲಿ ಉದ್ಭವಿಸಿರುವ ಭಾಷಾ ಸಮಸ್ಯೆಯನ್ನು ಅರ್ಥಮಾಡಿ ಕೊಂಡಿರುವುದು ಒಳ್ಳೆಯ ಬೆಳವಣಿಗೆ.
-ರಮಾನಂದ ಶರ್ಮಾ, ಬೆಂಗಳೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…