ಓದುಗರ ಪತ್ರ
ಬ್ಯಾಂಕ್ ಆಫ್ ಬರೋಡಾ ವಿವಿಧ ರಾಜ್ಯಗಳಲ್ಲಿ ಕೆಲಸಮಾಡುವ ತನ್ನಸಿಬ್ಬಂದಿಗೆ ಸ್ಥಳೀಯ ಭಾಷೆಯನ್ನು ಕಲಿಸಲು ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು, ಕರ್ನಾಟಕದಲ್ಲಿ ೪೫೦ ಹುದ್ದೆಗಳಿಗೆ ನೇಮಕಾತಿ ನಡೆಸಲು ಅಧಿಸೂಚನೆ ಹೊರಡಿಸಿದೆ.
ಇದೊಂದು ಬಹುನಿರೀಕ್ಷಿತ ಶ್ಲಾಘನೀಯ ಕ್ರಮವಾಗಿದ್ದು, ಎಲ್ಲ ಬ್ಯಾಂಕುಗಳೂ ಇದನ್ನು ಅನುಸರಿಸುವ ಆಶಯವನ್ನು ಕನ್ನಡಿಗರು ವ್ಯಕ್ತ ಮಾಡುತ್ತಿದ್ದಾರೆ. ವಿಳಂಬವಾದರೂ, ಕನ್ನಡಿಗರ ಹೋರಾಟ ಮತ್ತು ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದರೆ, ಈ ಸಿಬ್ಬಂದಿ ಸ್ಥಳೀಯ ಭಾಷೆಯನ್ನು ಕಲಿತು ಅದರಲ್ಲಿ ವ್ಯವಹರಿಸಲು ಶುರು ಮಾಡುವ ಹೊತ್ತಿಗೆ ಅವರಿಗೆ ವರ್ಗಾವಣೆ ಆದರೆ, ಇದರಿಂದ ಯಾವುದೇ ಪ್ರಯೋಜನವಿಲ್ಲ. ಈ ಪ್ರಯತ್ನ ಯಶಸ್ವಿ ಆಗಬಹುದೇ ಎನ್ನುವ ಜಿಜ್ಞಾಸೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಇದರ ಬದಲಾಗಿ ಸಿಬ್ಬಂದಿಗಳನ್ನು ಸ್ಥಳೀಯವಾಗಿ ಆಯ್ಕೆ ಮಾಡಿ, ಅವರನ್ನು ಅವರವರ ಭಾಷಾ ಪ್ರದೇಶಗಳಲ್ಲಿಯೇ ವರ್ಗಾವಣೆ ಮಾಡಬಹುದಲ್ಲವೇ?
– ರಮಾನಂದ ಶರ್ಮಾ, ಬೆಂಗಳೂರು
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…