ಓದುಗರ ಪತ್ರ
ಬ್ಯಾಂಕ್ ಆಫ್ ಬರೋಡಾ ವಿವಿಧ ರಾಜ್ಯಗಳಲ್ಲಿ ಕೆಲಸಮಾಡುವ ತನ್ನಸಿಬ್ಬಂದಿಗೆ ಸ್ಥಳೀಯ ಭಾಷೆಯನ್ನು ಕಲಿಸಲು ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು, ಕರ್ನಾಟಕದಲ್ಲಿ ೪೫೦ ಹುದ್ದೆಗಳಿಗೆ ನೇಮಕಾತಿ ನಡೆಸಲು ಅಧಿಸೂಚನೆ ಹೊರಡಿಸಿದೆ.
ಇದೊಂದು ಬಹುನಿರೀಕ್ಷಿತ ಶ್ಲಾಘನೀಯ ಕ್ರಮವಾಗಿದ್ದು, ಎಲ್ಲ ಬ್ಯಾಂಕುಗಳೂ ಇದನ್ನು ಅನುಸರಿಸುವ ಆಶಯವನ್ನು ಕನ್ನಡಿಗರು ವ್ಯಕ್ತ ಮಾಡುತ್ತಿದ್ದಾರೆ. ವಿಳಂಬವಾದರೂ, ಕನ್ನಡಿಗರ ಹೋರಾಟ ಮತ್ತು ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದರೆ, ಈ ಸಿಬ್ಬಂದಿ ಸ್ಥಳೀಯ ಭಾಷೆಯನ್ನು ಕಲಿತು ಅದರಲ್ಲಿ ವ್ಯವಹರಿಸಲು ಶುರು ಮಾಡುವ ಹೊತ್ತಿಗೆ ಅವರಿಗೆ ವರ್ಗಾವಣೆ ಆದರೆ, ಇದರಿಂದ ಯಾವುದೇ ಪ್ರಯೋಜನವಿಲ್ಲ. ಈ ಪ್ರಯತ್ನ ಯಶಸ್ವಿ ಆಗಬಹುದೇ ಎನ್ನುವ ಜಿಜ್ಞಾಸೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಇದರ ಬದಲಾಗಿ ಸಿಬ್ಬಂದಿಗಳನ್ನು ಸ್ಥಳೀಯವಾಗಿ ಆಯ್ಕೆ ಮಾಡಿ, ಅವರನ್ನು ಅವರವರ ಭಾಷಾ ಪ್ರದೇಶಗಳಲ್ಲಿಯೇ ವರ್ಗಾವಣೆ ಮಾಡಬಹುದಲ್ಲವೇ?
– ರಮಾನಂದ ಶರ್ಮಾ, ಬೆಂಗಳೂರು
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…