ಓದುಗರ ಪತ್ರ
ಬ್ಯಾಂಕ್ ಆಫ್ ಬರೋಡಾ ವಿವಿಧ ರಾಜ್ಯಗಳಲ್ಲಿ ಕೆಲಸಮಾಡುವ ತನ್ನಸಿಬ್ಬಂದಿಗೆ ಸ್ಥಳೀಯ ಭಾಷೆಯನ್ನು ಕಲಿಸಲು ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು, ಕರ್ನಾಟಕದಲ್ಲಿ ೪೫೦ ಹುದ್ದೆಗಳಿಗೆ ನೇಮಕಾತಿ ನಡೆಸಲು ಅಧಿಸೂಚನೆ ಹೊರಡಿಸಿದೆ.
ಇದೊಂದು ಬಹುನಿರೀಕ್ಷಿತ ಶ್ಲಾಘನೀಯ ಕ್ರಮವಾಗಿದ್ದು, ಎಲ್ಲ ಬ್ಯಾಂಕುಗಳೂ ಇದನ್ನು ಅನುಸರಿಸುವ ಆಶಯವನ್ನು ಕನ್ನಡಿಗರು ವ್ಯಕ್ತ ಮಾಡುತ್ತಿದ್ದಾರೆ. ವಿಳಂಬವಾದರೂ, ಕನ್ನಡಿಗರ ಹೋರಾಟ ಮತ್ತು ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದರೆ, ಈ ಸಿಬ್ಬಂದಿ ಸ್ಥಳೀಯ ಭಾಷೆಯನ್ನು ಕಲಿತು ಅದರಲ್ಲಿ ವ್ಯವಹರಿಸಲು ಶುರು ಮಾಡುವ ಹೊತ್ತಿಗೆ ಅವರಿಗೆ ವರ್ಗಾವಣೆ ಆದರೆ, ಇದರಿಂದ ಯಾವುದೇ ಪ್ರಯೋಜನವಿಲ್ಲ. ಈ ಪ್ರಯತ್ನ ಯಶಸ್ವಿ ಆಗಬಹುದೇ ಎನ್ನುವ ಜಿಜ್ಞಾಸೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಇದರ ಬದಲಾಗಿ ಸಿಬ್ಬಂದಿಗಳನ್ನು ಸ್ಥಳೀಯವಾಗಿ ಆಯ್ಕೆ ಮಾಡಿ, ಅವರನ್ನು ಅವರವರ ಭಾಷಾ ಪ್ರದೇಶಗಳಲ್ಲಿಯೇ ವರ್ಗಾವಣೆ ಮಾಡಬಹುದಲ್ಲವೇ?
– ರಮಾನಂದ ಶರ್ಮಾ, ಬೆಂಗಳೂರು
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…
ಟಿ.ನರಸೀಪುರ: ಡೆತ್ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…