Categories: Andolana originals

ಓದುಗರ ಪತ್ರ: ರೈಲ್ವೆ ಇಲಾಖೆ ಮೇಲೆ ಭರವಸೆ ಮೂಡಿದೆ

ಮುಂಬೈನಿಂದ ಅಸ್ಸಾಂನ ಗೌಹತಿಗೆ ಮದುವೆಗೆಂದು ತೆರಳುತ್ತಿದ್ದ ಒಂದೇ ಕುಟುಂಬದ 34 ಸದಸ್ಯರಿದ್ದ ರೈಲು, ನ.14ರ ಬೆಳಿಗ್ಗೆ 6.55ಕ್ಕೆ ಮುಂಬೈನಿಂದ ಹೊರಟು, ನ.15ರಂದು ಹೌರ ನಗರವನ್ನು 4 ಗಂಟೆಗಳ ಕಾಲ ತಡವಾಗಿ ತಲುಪಿದೆ.
ರೈಲು ತಡವಾಗಿದ್ದರಿಂದ ಗೌಹತಿಯನ್ನು ಮದುವೆ ಮುಹೂರ್ತದ ಸಮಯಕ್ಕೆ ತಲುಪಲು ಸಾಧ್ಯವಾಗುವುದಿಲ್ಲ. ಎಂಬುದನ್ನು ಅರಿತ ಆ ಕುಟುಂಬ ಈ ಕುರಿತು ‘ಎಕ್ಸ್’ ಖಾತೆಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರವರನ್ನು ಉಲ್ಲೇಖಿಸಿ ತಮ್ಮ ಸಮಸ್ಯೆಯನ್ನು ಹಂಚಿಕೊಂಡಿತ್ತು. ವಿಚಾರ ತಿಳಿದ ಕೂಡಲೇ ಕ್ರಮಕ್ಕೆ ಮುಂದಾದ ಸಚಿವರು, ರೈಲ್ವೆ ಇಲಾಖೆ ಅಧಿಕಾರಿಗಳಿಗೆ ರೈಲು ನಿಗದಿತ ಸಮಯಕ್ಕೆ ಗೌಹತಿಯನ್ನು ತಲುಪುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದರು. ಪರಿಣಾಮ ರೈಲು ನಿಗದಿಪಡಿಸಿದಂತೆ ನ.16ರ ಬೆಳಿಗ್ಗೆ 10:05ಕ್ಕೆ ಗೌಹತಿ ತಲುಪಿದೆ. ಇದರಿಂದಾಗಿ ಮದುವೆ ಸುಸೂತ್ರವಾಗಿ ನಡೆದಿದೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ.
ಸಾಮಾನ್ಯವಾಗಿ ರೈಲುಗಳು ಆಗಾಗ್ಗೆ ವಿಳಂಬವಾಗುವ ಕಾರಣಕ್ಕೆ ಸುದ್ದಿಯಲ್ಲಿರುತ್ತವೆ. ಕೆಲವೊಮ್ಮೆ ಸಮಯಕ್ಕೆ ಸರಿಯಾಗಿ ನಿಲ್ದಾಣದಿಂದ ಹೊರಟರೂ ತಲುಪಬೇಕಾದ ಸ್ಥಳವನ್ನು ನಿಗದಿತ ಸಮಯಕ್ಕೆ ತಲುಪುವುದಿಲ್ಲ ಎಂಬ ಆರೋಪ ಕೇಳಿ ಬರುತ್ತಲೇ ಇರುತ್ತದೆ. ಸದ್ಯ ಈಗ ರೈಲ್ವೆ ಸಚಿವರು ಪ್ರಯಾಣಿಕರ ಮನವಿಗೆ ಸ್ಪಂದಿಸಿ ಸಮಯಕ್ಕೆ ಸರಿಯಾಗಿ ರೈಲು ನಿಲ್ದಾಣವನ್ನು ತಲುಪುವಂತೆ ಮಾಡಿರುವುದು ಪ್ರಯಾಣಿಕರಿಗೆ ರೈಲ್ವೆ ಇಲಾಖೆಯ ಮೇಲೆ ಭರವಸೆ ಮೂಡುವಂತೆ ಮಾಡಿದೆ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮೇ.3ರಂದು ನಡೆದಿದ್ದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ.3ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ…

32 mins ago

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

2 hours ago

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

2 hours ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

4 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

4 hours ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

4 hours ago