Categories: Andolana originals

ಓದುಗರ ಪತ್ರ: ರೈಲ್ವೆ ಇಲಾಖೆ ಮೇಲೆ ಭರವಸೆ ಮೂಡಿದೆ

ಮುಂಬೈನಿಂದ ಅಸ್ಸಾಂನ ಗೌಹತಿಗೆ ಮದುವೆಗೆಂದು ತೆರಳುತ್ತಿದ್ದ ಒಂದೇ ಕುಟುಂಬದ 34 ಸದಸ್ಯರಿದ್ದ ರೈಲು, ನ.14ರ ಬೆಳಿಗ್ಗೆ 6.55ಕ್ಕೆ ಮುಂಬೈನಿಂದ ಹೊರಟು, ನ.15ರಂದು ಹೌರ ನಗರವನ್ನು 4 ಗಂಟೆಗಳ ಕಾಲ ತಡವಾಗಿ ತಲುಪಿದೆ.
ರೈಲು ತಡವಾಗಿದ್ದರಿಂದ ಗೌಹತಿಯನ್ನು ಮದುವೆ ಮುಹೂರ್ತದ ಸಮಯಕ್ಕೆ ತಲುಪಲು ಸಾಧ್ಯವಾಗುವುದಿಲ್ಲ. ಎಂಬುದನ್ನು ಅರಿತ ಆ ಕುಟುಂಬ ಈ ಕುರಿತು ‘ಎಕ್ಸ್’ ಖಾತೆಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರವರನ್ನು ಉಲ್ಲೇಖಿಸಿ ತಮ್ಮ ಸಮಸ್ಯೆಯನ್ನು ಹಂಚಿಕೊಂಡಿತ್ತು. ವಿಚಾರ ತಿಳಿದ ಕೂಡಲೇ ಕ್ರಮಕ್ಕೆ ಮುಂದಾದ ಸಚಿವರು, ರೈಲ್ವೆ ಇಲಾಖೆ ಅಧಿಕಾರಿಗಳಿಗೆ ರೈಲು ನಿಗದಿತ ಸಮಯಕ್ಕೆ ಗೌಹತಿಯನ್ನು ತಲುಪುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದರು. ಪರಿಣಾಮ ರೈಲು ನಿಗದಿಪಡಿಸಿದಂತೆ ನ.16ರ ಬೆಳಿಗ್ಗೆ 10:05ಕ್ಕೆ ಗೌಹತಿ ತಲುಪಿದೆ. ಇದರಿಂದಾಗಿ ಮದುವೆ ಸುಸೂತ್ರವಾಗಿ ನಡೆದಿದೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ.
ಸಾಮಾನ್ಯವಾಗಿ ರೈಲುಗಳು ಆಗಾಗ್ಗೆ ವಿಳಂಬವಾಗುವ ಕಾರಣಕ್ಕೆ ಸುದ್ದಿಯಲ್ಲಿರುತ್ತವೆ. ಕೆಲವೊಮ್ಮೆ ಸಮಯಕ್ಕೆ ಸರಿಯಾಗಿ ನಿಲ್ದಾಣದಿಂದ ಹೊರಟರೂ ತಲುಪಬೇಕಾದ ಸ್ಥಳವನ್ನು ನಿಗದಿತ ಸಮಯಕ್ಕೆ ತಲುಪುವುದಿಲ್ಲ ಎಂಬ ಆರೋಪ ಕೇಳಿ ಬರುತ್ತಲೇ ಇರುತ್ತದೆ. ಸದ್ಯ ಈಗ ರೈಲ್ವೆ ಸಚಿವರು ಪ್ರಯಾಣಿಕರ ಮನವಿಗೆ ಸ್ಪಂದಿಸಿ ಸಮಯಕ್ಕೆ ಸರಿಯಾಗಿ ರೈಲು ನಿಲ್ದಾಣವನ್ನು ತಲುಪುವಂತೆ ಮಾಡಿರುವುದು ಪ್ರಯಾಣಿಕರಿಗೆ ರೈಲ್ವೆ ಇಲಾಖೆಯ ಮೇಲೆ ಭರವಸೆ ಮೂಡುವಂತೆ ಮಾಡಿದೆ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

48 mins ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

4 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

4 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

4 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

4 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

4 hours ago