Andolana originals

ಓದುಗರ ಪತ್ರ:  ಆಸ್ಪತ್ರೆ: ಭರವಸೆಗಿಂತಲೂ ಭಯವೇ ಜಾಸ್ತಿ

ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರಿಗೆ ಆಸ್ಪತ್ರೆಗೆ ಹೋಗುವುದೆಂದರೆ ಜೀವ ಉಳಿಸಿಕೊಳ್ಳುವ ಭರವಸೆಗಿಂತ, ‘ಜೇಬಿಗೆಕತ್ತರಿ’ ಬೀಳುವ ಭೀತಿಯೇಹೆಚ್ಚಾಗಿದೆ.

ದೇಶದಲ್ಲಿ ನಡೆಯುವ ಶಸ್ತ್ರಚಿಕಿತ್ಸೆಗಳಲ್ಲಿ ಅರ್ಧದಷ್ಟು ಅನಗತ್ಯ ಎಂಬ ವರದಿಗಳು ನಾಗರಿಕರನ್ನು ಬೆಚ್ಚಿ ಬೀಳಿಸಿವೆ. ರೋಗಿಯ ಪ್ರಾಣಕ್ಕಿಂತ ಹಣವೇ ದೊಡ್ಡದಾದಾಗ, ಪವಿತ್ರವಾದ ವೈದ್ಯಕೀಯ ವೃತ್ತಿಯ ಘನತೆ ಕುಸಿಯುತ್ತಿದೆ.

ಸತ್ತ ರೋಗಿಯನ್ನು ಬದುಕಿದ್ದಾರೆಂದು ಸುಳ್ಳುಹೇಳಿ ವೆಂಟಿಲೇಟರ್ ಬಿಲ್ ಮಾಡುವುದು ಹಾಗೂ ಕಮಿಷನ್ ಆಸೆಗಾಗಿ ಅನಗತ್ಯ ಪರೀಕ್ಷೆಗಳಿಗೆ ಶಿಫಾರಸು ಮಾಡುವುದು ಅಕ್ಷಮ್ಯ ಅಪರಾಧ. ‘ವೈದ್ಯೋ ನಾರಾಯಣೋಹರಿಃ’ ಎಂಬ ನಂಬಿಕೆಯನ್ನು ಬಂಡವಾಳ ಮಾಡಿಕೊಂಡು ಬಡವರ ರಕ್ತಹೀರುವ ಈ ಮಾಫಿಯಾ ನಿಲ್ಲಬೇಕಿದೆ. ಔಷಧ ಕಂಪೆನಿಗಳ ಆಮಿಷಕ್ಕೆ ಒಳಗಾಗಿ ಜನರಿಕ್ ಮದ್ದುಗಳನ್ನು ನೀಡುವ ಬದಲು, ದುಬಾರಿ ಬ್ರ್ಯಾಂಡ್‌ಗಳನ್ನು ರೋಗಿಗಳ ಮೇಲೆ ಹೇರುವುದು ಎಷ್ಟುಸರಿ? ಸರ್ಕಾರವು ತಕ್ಷಣವೇ ಇಂತಹ ದಂಧೆ ನಡೆಸುವ ಆಸ್ಪತ್ರೆಗಳ ಮೇಲೆ ಕಠಿಣ ನಿಗಾ ಇಡಬೇಕು ಮತ್ತು ನಿಯಮ ಉಲ್ಲಂಘಿಸುವ ಸಂಸ್ಥೆಗಳ ಪರವಾನಗಿಯನ್ನು ರದ್ದುಪಡಿಸಬೇಕು. ಜನ ಸಾಮಾನ್ಯರು ಆಸ್ಪತ್ರೆಗೆ ಹೋದಾಗ ಪರೀಕ್ಷೆ ಅಥವಾ ಶಸ್ತ್ರ ಚಿಕಿತ್ಸೆಯ ಅಗತ್ಯದ ಬಗ್ಗೆ ಸಂಶಯವಿದ್ದರೆ, ಮತ್ತೊಬ್ಬ ವೈದ್ಯರ ಅಭಿಪ್ರಾಯ (ಸಕೆಂಡ್ ಒಪೀನಿಯನ್) ಪಡೆಯಲು ಹಿಂಜರಿಯಬಾರದು. ನಾವು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಆರೋಗ್ಯ ಸೇವೆ ಎನ್ನುವುದು ಸಾಮಾನ್ಯ ಜನರಿಗೆ ಲಭ್ಯವಾಗುವ ಗ್ಯಾರಂಟಿಯೇ ಇರುವುದಿಲ್ಲ.

– ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು

ಆಂದೋಲನ ಡೆಸ್ಕ್

Recent Posts

ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

1 hour ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

1 hour ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

2 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

3 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

3 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

3 hours ago