Andolana originals

ಓದುಗರ ಪತ್ರ:  ಆಸ್ಪತ್ರೆ: ಭರವಸೆಗಿಂತಲೂ ಭಯವೇ ಜಾಸ್ತಿ

ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರಿಗೆ ಆಸ್ಪತ್ರೆಗೆ ಹೋಗುವುದೆಂದರೆ ಜೀವ ಉಳಿಸಿಕೊಳ್ಳುವ ಭರವಸೆಗಿಂತ, ‘ಜೇಬಿಗೆಕತ್ತರಿ’ ಬೀಳುವ ಭೀತಿಯೇಹೆಚ್ಚಾಗಿದೆ.

ದೇಶದಲ್ಲಿ ನಡೆಯುವ ಶಸ್ತ್ರಚಿಕಿತ್ಸೆಗಳಲ್ಲಿ ಅರ್ಧದಷ್ಟು ಅನಗತ್ಯ ಎಂಬ ವರದಿಗಳು ನಾಗರಿಕರನ್ನು ಬೆಚ್ಚಿ ಬೀಳಿಸಿವೆ. ರೋಗಿಯ ಪ್ರಾಣಕ್ಕಿಂತ ಹಣವೇ ದೊಡ್ಡದಾದಾಗ, ಪವಿತ್ರವಾದ ವೈದ್ಯಕೀಯ ವೃತ್ತಿಯ ಘನತೆ ಕುಸಿಯುತ್ತಿದೆ.

ಸತ್ತ ರೋಗಿಯನ್ನು ಬದುಕಿದ್ದಾರೆಂದು ಸುಳ್ಳುಹೇಳಿ ವೆಂಟಿಲೇಟರ್ ಬಿಲ್ ಮಾಡುವುದು ಹಾಗೂ ಕಮಿಷನ್ ಆಸೆಗಾಗಿ ಅನಗತ್ಯ ಪರೀಕ್ಷೆಗಳಿಗೆ ಶಿಫಾರಸು ಮಾಡುವುದು ಅಕ್ಷಮ್ಯ ಅಪರಾಧ. ‘ವೈದ್ಯೋ ನಾರಾಯಣೋಹರಿಃ’ ಎಂಬ ನಂಬಿಕೆಯನ್ನು ಬಂಡವಾಳ ಮಾಡಿಕೊಂಡು ಬಡವರ ರಕ್ತಹೀರುವ ಈ ಮಾಫಿಯಾ ನಿಲ್ಲಬೇಕಿದೆ. ಔಷಧ ಕಂಪೆನಿಗಳ ಆಮಿಷಕ್ಕೆ ಒಳಗಾಗಿ ಜನರಿಕ್ ಮದ್ದುಗಳನ್ನು ನೀಡುವ ಬದಲು, ದುಬಾರಿ ಬ್ರ್ಯಾಂಡ್‌ಗಳನ್ನು ರೋಗಿಗಳ ಮೇಲೆ ಹೇರುವುದು ಎಷ್ಟುಸರಿ? ಸರ್ಕಾರವು ತಕ್ಷಣವೇ ಇಂತಹ ದಂಧೆ ನಡೆಸುವ ಆಸ್ಪತ್ರೆಗಳ ಮೇಲೆ ಕಠಿಣ ನಿಗಾ ಇಡಬೇಕು ಮತ್ತು ನಿಯಮ ಉಲ್ಲಂಘಿಸುವ ಸಂಸ್ಥೆಗಳ ಪರವಾನಗಿಯನ್ನು ರದ್ದುಪಡಿಸಬೇಕು. ಜನ ಸಾಮಾನ್ಯರು ಆಸ್ಪತ್ರೆಗೆ ಹೋದಾಗ ಪರೀಕ್ಷೆ ಅಥವಾ ಶಸ್ತ್ರ ಚಿಕಿತ್ಸೆಯ ಅಗತ್ಯದ ಬಗ್ಗೆ ಸಂಶಯವಿದ್ದರೆ, ಮತ್ತೊಬ್ಬ ವೈದ್ಯರ ಅಭಿಪ್ರಾಯ (ಸಕೆಂಡ್ ಒಪೀನಿಯನ್) ಪಡೆಯಲು ಹಿಂಜರಿಯಬಾರದು. ನಾವು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಆರೋಗ್ಯ ಸೇವೆ ಎನ್ನುವುದು ಸಾಮಾನ್ಯ ಜನರಿಗೆ ಲಭ್ಯವಾಗುವ ಗ್ಯಾರಂಟಿಯೇ ಇರುವುದಿಲ್ಲ.

– ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

40 mins ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

41 mins ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

43 mins ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

4 hours ago