ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರಿಗೆ ಆಸ್ಪತ್ರೆಗೆ ಹೋಗುವುದೆಂದರೆ ಜೀವ ಉಳಿಸಿಕೊಳ್ಳುವ ಭರವಸೆಗಿಂತ, ‘ಜೇಬಿಗೆಕತ್ತರಿ’ ಬೀಳುವ ಭೀತಿಯೇಹೆಚ್ಚಾಗಿದೆ.
ದೇಶದಲ್ಲಿ ನಡೆಯುವ ಶಸ್ತ್ರಚಿಕಿತ್ಸೆಗಳಲ್ಲಿ ಅರ್ಧದಷ್ಟು ಅನಗತ್ಯ ಎಂಬ ವರದಿಗಳು ನಾಗರಿಕರನ್ನು ಬೆಚ್ಚಿ ಬೀಳಿಸಿವೆ. ರೋಗಿಯ ಪ್ರಾಣಕ್ಕಿಂತ ಹಣವೇ ದೊಡ್ಡದಾದಾಗ, ಪವಿತ್ರವಾದ ವೈದ್ಯಕೀಯ ವೃತ್ತಿಯ ಘನತೆ ಕುಸಿಯುತ್ತಿದೆ.
ಸತ್ತ ರೋಗಿಯನ್ನು ಬದುಕಿದ್ದಾರೆಂದು ಸುಳ್ಳುಹೇಳಿ ವೆಂಟಿಲೇಟರ್ ಬಿಲ್ ಮಾಡುವುದು ಹಾಗೂ ಕಮಿಷನ್ ಆಸೆಗಾಗಿ ಅನಗತ್ಯ ಪರೀಕ್ಷೆಗಳಿಗೆ ಶಿಫಾರಸು ಮಾಡುವುದು ಅಕ್ಷಮ್ಯ ಅಪರಾಧ. ‘ವೈದ್ಯೋ ನಾರಾಯಣೋಹರಿಃ’ ಎಂಬ ನಂಬಿಕೆಯನ್ನು ಬಂಡವಾಳ ಮಾಡಿಕೊಂಡು ಬಡವರ ರಕ್ತಹೀರುವ ಈ ಮಾಫಿಯಾ ನಿಲ್ಲಬೇಕಿದೆ. ಔಷಧ ಕಂಪೆನಿಗಳ ಆಮಿಷಕ್ಕೆ ಒಳಗಾಗಿ ಜನರಿಕ್ ಮದ್ದುಗಳನ್ನು ನೀಡುವ ಬದಲು, ದುಬಾರಿ ಬ್ರ್ಯಾಂಡ್ಗಳನ್ನು ರೋಗಿಗಳ ಮೇಲೆ ಹೇರುವುದು ಎಷ್ಟುಸರಿ? ಸರ್ಕಾರವು ತಕ್ಷಣವೇ ಇಂತಹ ದಂಧೆ ನಡೆಸುವ ಆಸ್ಪತ್ರೆಗಳ ಮೇಲೆ ಕಠಿಣ ನಿಗಾ ಇಡಬೇಕು ಮತ್ತು ನಿಯಮ ಉಲ್ಲಂಘಿಸುವ ಸಂಸ್ಥೆಗಳ ಪರವಾನಗಿಯನ್ನು ರದ್ದುಪಡಿಸಬೇಕು. ಜನ ಸಾಮಾನ್ಯರು ಆಸ್ಪತ್ರೆಗೆ ಹೋದಾಗ ಪರೀಕ್ಷೆ ಅಥವಾ ಶಸ್ತ್ರ ಚಿಕಿತ್ಸೆಯ ಅಗತ್ಯದ ಬಗ್ಗೆ ಸಂಶಯವಿದ್ದರೆ, ಮತ್ತೊಬ್ಬ ವೈದ್ಯರ ಅಭಿಪ್ರಾಯ (ಸಕೆಂಡ್ ಒಪೀನಿಯನ್) ಪಡೆಯಲು ಹಿಂಜರಿಯಬಾರದು. ನಾವು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಆರೋಗ್ಯ ಸೇವೆ ಎನ್ನುವುದು ಸಾಮಾನ್ಯ ಜನರಿಗೆ ಲಭ್ಯವಾಗುವ ಗ್ಯಾರಂಟಿಯೇ ಇರುವುದಿಲ್ಲ.
– ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…