Andolana originals

ಓದುಗರ ಪತ್ರ:  ಆಸ್ಪತ್ರೆ: ಭರವಸೆಗಿಂತಲೂ ಭಯವೇ ಜಾಸ್ತಿ

ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರಿಗೆ ಆಸ್ಪತ್ರೆಗೆ ಹೋಗುವುದೆಂದರೆ ಜೀವ ಉಳಿಸಿಕೊಳ್ಳುವ ಭರವಸೆಗಿಂತ, ‘ಜೇಬಿಗೆಕತ್ತರಿ’ ಬೀಳುವ ಭೀತಿಯೇಹೆಚ್ಚಾಗಿದೆ.

ದೇಶದಲ್ಲಿ ನಡೆಯುವ ಶಸ್ತ್ರಚಿಕಿತ್ಸೆಗಳಲ್ಲಿ ಅರ್ಧದಷ್ಟು ಅನಗತ್ಯ ಎಂಬ ವರದಿಗಳು ನಾಗರಿಕರನ್ನು ಬೆಚ್ಚಿ ಬೀಳಿಸಿವೆ. ರೋಗಿಯ ಪ್ರಾಣಕ್ಕಿಂತ ಹಣವೇ ದೊಡ್ಡದಾದಾಗ, ಪವಿತ್ರವಾದ ವೈದ್ಯಕೀಯ ವೃತ್ತಿಯ ಘನತೆ ಕುಸಿಯುತ್ತಿದೆ.

ಸತ್ತ ರೋಗಿಯನ್ನು ಬದುಕಿದ್ದಾರೆಂದು ಸುಳ್ಳುಹೇಳಿ ವೆಂಟಿಲೇಟರ್ ಬಿಲ್ ಮಾಡುವುದು ಹಾಗೂ ಕಮಿಷನ್ ಆಸೆಗಾಗಿ ಅನಗತ್ಯ ಪರೀಕ್ಷೆಗಳಿಗೆ ಶಿಫಾರಸು ಮಾಡುವುದು ಅಕ್ಷಮ್ಯ ಅಪರಾಧ. ‘ವೈದ್ಯೋ ನಾರಾಯಣೋಹರಿಃ’ ಎಂಬ ನಂಬಿಕೆಯನ್ನು ಬಂಡವಾಳ ಮಾಡಿಕೊಂಡು ಬಡವರ ರಕ್ತಹೀರುವ ಈ ಮಾಫಿಯಾ ನಿಲ್ಲಬೇಕಿದೆ. ಔಷಧ ಕಂಪೆನಿಗಳ ಆಮಿಷಕ್ಕೆ ಒಳಗಾಗಿ ಜನರಿಕ್ ಮದ್ದುಗಳನ್ನು ನೀಡುವ ಬದಲು, ದುಬಾರಿ ಬ್ರ್ಯಾಂಡ್‌ಗಳನ್ನು ರೋಗಿಗಳ ಮೇಲೆ ಹೇರುವುದು ಎಷ್ಟುಸರಿ? ಸರ್ಕಾರವು ತಕ್ಷಣವೇ ಇಂತಹ ದಂಧೆ ನಡೆಸುವ ಆಸ್ಪತ್ರೆಗಳ ಮೇಲೆ ಕಠಿಣ ನಿಗಾ ಇಡಬೇಕು ಮತ್ತು ನಿಯಮ ಉಲ್ಲಂಘಿಸುವ ಸಂಸ್ಥೆಗಳ ಪರವಾನಗಿಯನ್ನು ರದ್ದುಪಡಿಸಬೇಕು. ಜನ ಸಾಮಾನ್ಯರು ಆಸ್ಪತ್ರೆಗೆ ಹೋದಾಗ ಪರೀಕ್ಷೆ ಅಥವಾ ಶಸ್ತ್ರ ಚಿಕಿತ್ಸೆಯ ಅಗತ್ಯದ ಬಗ್ಗೆ ಸಂಶಯವಿದ್ದರೆ, ಮತ್ತೊಬ್ಬ ವೈದ್ಯರ ಅಭಿಪ್ರಾಯ (ಸಕೆಂಡ್ ಒಪೀನಿಯನ್) ಪಡೆಯಲು ಹಿಂಜರಿಯಬಾರದು. ನಾವು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಆರೋಗ್ಯ ಸೇವೆ ಎನ್ನುವುದು ಸಾಮಾನ್ಯ ಜನರಿಗೆ ಲಭ್ಯವಾಗುವ ಗ್ಯಾರಂಟಿಯೇ ಇರುವುದಿಲ್ಲ.

– ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

53 seconds ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

3 mins ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

6 mins ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

10 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

10 hours ago