ಓದುಗರ ಪತ್ರ
ದೇಶದಲ್ಲಿ ೪೦ ಕೋಟಿಗೂ ಹೆಚ್ಚು ಮಂದಿ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದರೂ ಜಂಕ್ ಫುಡ್ ಕಂಪೆನಿಗಳು ಪೌಷ್ಟಿಕಾಂಶದ ವಿವರಗಳನ್ನು ಸಣ್ಣ ಅಕ್ಷರಗಳಲ್ಲಿ ಬರೆದು ಜನರನ್ನು ವಂಚಿಸುತ್ತಿವೆ. ಫ್ರಾನ್ಸ್ನ ನ್ಯೂಟ್ರಿ ಸ್ಕೋರ್ (ಎ ಇಂದ ಈ) ಮಾದರಿಯನ್ನು ಭಾರತದಲ್ಲೂ ತಕ್ಷಣವೇ ಕಡ್ಡಾಯಗೊಳಿಸಬೇಕು.
ಪ್ರಸ್ತುತ ಎಫ್.ಎಸ್.ಎಸ್. ಎ.ಐ. ತರಲು ಹೊರಟಿರುವ ಸ್ಟಾರ್ ರೇಟಿಂಗ್ ವ್ಯವಸ್ಥೆಯು ಕಾರ್ಪೊರೇಟ್ ಕಂಪೆನಿಗಳ ಲಾಭಕ್ಕಾಗಿ ಹೆಣೆದಿರುವ ಕಣ್ಣೊರೆಸುವ ತಂತ್ರವಾಗಿದೆ. ಪ್ಯಾಕೆಟ್ಗಳ ಮೇಲೆ ನೂತನ ತಂತ್ರeನ ಆಧಾರಿತ ಬಾರ್ಕೋಡ್ ಮತ್ತು ಸ್ಮಾರ್ಟ್ ಕ್ಯೂಆರ್ ತಂತ್ರeನವನ್ನು ಅಳವಡಿಸಬೇಕು. ಗ್ರಾಹಕರು ಮೊಬೈಲ್ ಮೂಲಕ ಸ್ಕ್ಯಾನ್ ಮಾಡಿದ ತಕ್ಷಣ ಆಹಾರದಲ್ಲಿರುವ ಅಪಾಯಕಾರಿ ಸಕ್ಕರೆ, ಉಪ್ಪು ಮತ್ತು ಸ್ಯಾಚುರೇಟೆಡ್ ಕೊಬ್ಬಿನ ಮಟ್ಟವು ‘ಎ ನಿಂದ ಈ’ ಶ್ರೇಣಿಯಲ್ಲಿ ಸ್ಪಷ್ಟವಾಗಿ ಕಾಣಿಸಬೇಕು. ಸಾರ್ವಜನಿಕರ ಆರೋಗ್ಯವನ್ನು ಕಂಪೆನಿಗಳ ಲಾಭಕ್ಕಾಗಿ ಬಲಿ ಕೊಡುವುದನ್ನು ಕೇಂದ್ರ ಸರ್ಕಾರ ತಕ್ಷಣವೇ ನಿಲ್ಲಿಸಬೇಕು.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…