Andolana originals

ಓದುಗರ ಪತ್ರ: ಸಾಹಿತ್ಯ ಪರಿಷತ್ ಸುಧಾರಣೆ ಅಗತ್ಯ

ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ ಕುರಿತಾಗಿ ಕೇಳಿಬರುತ್ತಿರುವ ಭ್ರಷ್ಟಾಚಾರ ಹಾಗೂ ಅವ್ಯವಹಾರದ ಸುದ್ದಿಗಳು ಕನ್ನಡ ಪ್ರೇಮಿಗಳಿಗೆ ನೋವುಂಟು ಮಾಡಿವೆ. ಕನ್ನಡಿಗರ ಭಾವನೆಗಳ ಜತೆ ಅವಿನಾಭಾವ ಸಂಬಂಧ ಹೊಂದಿರುವ ಪರಿಷತ್, ಸಾಹಿತ್ಯ, ಸಂಸ್ಕೃತಿ ಮತ್ತು ಕನ್ನಡ ಭಾಷೆಯ ಪ್ರಚಾರಕ್ಕೆ ಅಹರ್ನಿಶಿ ಕಾರ್ಯನಿರ್ವಹಿಸಿದ್ದು ಎಲ್ಲರಿಗೂ ತಿಳಿದ ಸಂಗತಿ. ಆದರೆ ಇತ್ತೀಚಿನ ದಿನಗಳಲ್ಲಿ ಈ ಪ್ರತಿಷ್ಠಿತ ಸಂಸ್ಥೆಯ ಮೇಲೆಯೇ ಭ್ರಷ್ಟಾಚಾರದ ಆರೋಪ ಕೇಳಿಬರುತ್ತಿರುವುದು ವಿಷಾದದ ಸಂಗತಿ.

ಸಾಹಿತ್ಯ ಪರಿಷತ್‌ನಿಂದ ಜನರಿಗೆ ಕನ್ನಡದ ಸೇವೆ, ಪಾರದರ್ಶಕ ನಿರ್ವಹಣೆ ಮತ್ತು ಸಾಹಿತ್ಯ ಪ್ರೋತ್ಸಾಹದ ನಿರೀಕ್ಷೆಯಿದೆ.ಆದರೆ ಈ ಸ್ಥಾನದಲ್ಲಿ ಕುಳಿತಿರುವವರೇ ಅಧಿಕಾರ ದುರುಪಯೋಗ, ಹಣಕಾಸಿನ ಅವ್ಯವಹಾರ ಮತ್ತು ಸ್ವಾರ್ಥದ ನಡವಳಿಕೆಯಲ್ಲಿ ತೊಡಗಿರುವರೆಂಬ ಆರೋಪ ಕೇಳಿ ಬಂದಿರುವುದು ಕನ್ನಡ ಸಂಸ್ಕೃತಿಗೆ ಮಾಡಿದ ಅಪಮಾನ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸೂಪರ್ ಸೀಡ್ ಮಾಡಲು ಕ್ರಮ ಕೈಗೊಳ್ಳುವುದು ಸೂಕ್ತ. ಕೇವಲ ಆಡಳಿತಾಽಕಾರಿಯನ್ನು ನೇಮಕ ಮಾಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಮೂಲಭೂತ ಬದಲಾವಣೆಗಳು, ಕಾನೂನು ಬದ್ಧತೆ, ಪಾರದರ್ಶಕ ಹಣಕಾಸು ವ್ಯವಸ್ಥೆ ಮತ್ತು ನೈತಿಕ ಹೊಣೆಗಾರಿಕೆಗಳನ್ನೊಳಗೊಂಡ ಸುಧಾರಣೆಗಳು ಅಗತ್ಯ. ಸಾಹಿತ್ಯ ಪರಿಷತ್ ರಾಜಕೀಯ ವೇದಿಕೆಯಾಗಬಾರದು, ಅದು ಕನ್ನಡಿಗರ ಗೌರವದ ಸಂಕೇತವಾಗಿ ಉಳಿಯಬೇಕು.

– ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

4 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

4 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

5 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

6 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

6 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

14 hours ago