Andolana originals

ಓದುಗರ ಪತ್ರ: ಸಾಹಿತ್ಯ ಪರಿಷತ್ ಸುಧಾರಣೆ ಅಗತ್ಯ

ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ ಕುರಿತಾಗಿ ಕೇಳಿಬರುತ್ತಿರುವ ಭ್ರಷ್ಟಾಚಾರ ಹಾಗೂ ಅವ್ಯವಹಾರದ ಸುದ್ದಿಗಳು ಕನ್ನಡ ಪ್ರೇಮಿಗಳಿಗೆ ನೋವುಂಟು ಮಾಡಿವೆ. ಕನ್ನಡಿಗರ ಭಾವನೆಗಳ ಜತೆ ಅವಿನಾಭಾವ ಸಂಬಂಧ ಹೊಂದಿರುವ ಪರಿಷತ್, ಸಾಹಿತ್ಯ, ಸಂಸ್ಕೃತಿ ಮತ್ತು ಕನ್ನಡ ಭಾಷೆಯ ಪ್ರಚಾರಕ್ಕೆ ಅಹರ್ನಿಶಿ ಕಾರ್ಯನಿರ್ವಹಿಸಿದ್ದು ಎಲ್ಲರಿಗೂ ತಿಳಿದ ಸಂಗತಿ. ಆದರೆ ಇತ್ತೀಚಿನ ದಿನಗಳಲ್ಲಿ ಈ ಪ್ರತಿಷ್ಠಿತ ಸಂಸ್ಥೆಯ ಮೇಲೆಯೇ ಭ್ರಷ್ಟಾಚಾರದ ಆರೋಪ ಕೇಳಿಬರುತ್ತಿರುವುದು ವಿಷಾದದ ಸಂಗತಿ.

ಸಾಹಿತ್ಯ ಪರಿಷತ್‌ನಿಂದ ಜನರಿಗೆ ಕನ್ನಡದ ಸೇವೆ, ಪಾರದರ್ಶಕ ನಿರ್ವಹಣೆ ಮತ್ತು ಸಾಹಿತ್ಯ ಪ್ರೋತ್ಸಾಹದ ನಿರೀಕ್ಷೆಯಿದೆ.ಆದರೆ ಈ ಸ್ಥಾನದಲ್ಲಿ ಕುಳಿತಿರುವವರೇ ಅಧಿಕಾರ ದುರುಪಯೋಗ, ಹಣಕಾಸಿನ ಅವ್ಯವಹಾರ ಮತ್ತು ಸ್ವಾರ್ಥದ ನಡವಳಿಕೆಯಲ್ಲಿ ತೊಡಗಿರುವರೆಂಬ ಆರೋಪ ಕೇಳಿ ಬಂದಿರುವುದು ಕನ್ನಡ ಸಂಸ್ಕೃತಿಗೆ ಮಾಡಿದ ಅಪಮಾನ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸೂಪರ್ ಸೀಡ್ ಮಾಡಲು ಕ್ರಮ ಕೈಗೊಳ್ಳುವುದು ಸೂಕ್ತ. ಕೇವಲ ಆಡಳಿತಾಽಕಾರಿಯನ್ನು ನೇಮಕ ಮಾಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಮೂಲಭೂತ ಬದಲಾವಣೆಗಳು, ಕಾನೂನು ಬದ್ಧತೆ, ಪಾರದರ್ಶಕ ಹಣಕಾಸು ವ್ಯವಸ್ಥೆ ಮತ್ತು ನೈತಿಕ ಹೊಣೆಗಾರಿಕೆಗಳನ್ನೊಳಗೊಂಡ ಸುಧಾರಣೆಗಳು ಅಗತ್ಯ. ಸಾಹಿತ್ಯ ಪರಿಷತ್ ರಾಜಕೀಯ ವೇದಿಕೆಯಾಗಬಾರದು, ಅದು ಕನ್ನಡಿಗರ ಗೌರವದ ಸಂಕೇತವಾಗಿ ಉಳಿಯಬೇಕು.

– ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

20 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

20 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

20 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

20 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

20 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

23 hours ago