Andolana originals

ಓದುಗರ ಪತ್ರ: ಸಾಹಿತ್ಯ ಪರಿಷತ್ ಸುಧಾರಣೆ ಅಗತ್ಯ

ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ ಕುರಿತಾಗಿ ಕೇಳಿಬರುತ್ತಿರುವ ಭ್ರಷ್ಟಾಚಾರ ಹಾಗೂ ಅವ್ಯವಹಾರದ ಸುದ್ದಿಗಳು ಕನ್ನಡ ಪ್ರೇಮಿಗಳಿಗೆ ನೋವುಂಟು ಮಾಡಿವೆ. ಕನ್ನಡಿಗರ ಭಾವನೆಗಳ ಜತೆ ಅವಿನಾಭಾವ ಸಂಬಂಧ ಹೊಂದಿರುವ ಪರಿಷತ್, ಸಾಹಿತ್ಯ, ಸಂಸ್ಕೃತಿ ಮತ್ತು ಕನ್ನಡ ಭಾಷೆಯ ಪ್ರಚಾರಕ್ಕೆ ಅಹರ್ನಿಶಿ ಕಾರ್ಯನಿರ್ವಹಿಸಿದ್ದು ಎಲ್ಲರಿಗೂ ತಿಳಿದ ಸಂಗತಿ. ಆದರೆ ಇತ್ತೀಚಿನ ದಿನಗಳಲ್ಲಿ ಈ ಪ್ರತಿಷ್ಠಿತ ಸಂಸ್ಥೆಯ ಮೇಲೆಯೇ ಭ್ರಷ್ಟಾಚಾರದ ಆರೋಪ ಕೇಳಿಬರುತ್ತಿರುವುದು ವಿಷಾದದ ಸಂಗತಿ.

ಸಾಹಿತ್ಯ ಪರಿಷತ್‌ನಿಂದ ಜನರಿಗೆ ಕನ್ನಡದ ಸೇವೆ, ಪಾರದರ್ಶಕ ನಿರ್ವಹಣೆ ಮತ್ತು ಸಾಹಿತ್ಯ ಪ್ರೋತ್ಸಾಹದ ನಿರೀಕ್ಷೆಯಿದೆ.ಆದರೆ ಈ ಸ್ಥಾನದಲ್ಲಿ ಕುಳಿತಿರುವವರೇ ಅಧಿಕಾರ ದುರುಪಯೋಗ, ಹಣಕಾಸಿನ ಅವ್ಯವಹಾರ ಮತ್ತು ಸ್ವಾರ್ಥದ ನಡವಳಿಕೆಯಲ್ಲಿ ತೊಡಗಿರುವರೆಂಬ ಆರೋಪ ಕೇಳಿ ಬಂದಿರುವುದು ಕನ್ನಡ ಸಂಸ್ಕೃತಿಗೆ ಮಾಡಿದ ಅಪಮಾನ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸೂಪರ್ ಸೀಡ್ ಮಾಡಲು ಕ್ರಮ ಕೈಗೊಳ್ಳುವುದು ಸೂಕ್ತ. ಕೇವಲ ಆಡಳಿತಾಽಕಾರಿಯನ್ನು ನೇಮಕ ಮಾಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಮೂಲಭೂತ ಬದಲಾವಣೆಗಳು, ಕಾನೂನು ಬದ್ಧತೆ, ಪಾರದರ್ಶಕ ಹಣಕಾಸು ವ್ಯವಸ್ಥೆ ಮತ್ತು ನೈತಿಕ ಹೊಣೆಗಾರಿಕೆಗಳನ್ನೊಳಗೊಂಡ ಸುಧಾರಣೆಗಳು ಅಗತ್ಯ. ಸಾಹಿತ್ಯ ಪರಿಷತ್ ರಾಜಕೀಯ ವೇದಿಕೆಯಾಗಬಾರದು, ಅದು ಕನ್ನಡಿಗರ ಗೌರವದ ಸಂಕೇತವಾಗಿ ಉಳಿಯಬೇಕು.

– ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

4 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

8 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

8 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

8 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

11 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

11 hours ago