Categories: Andolana originals

ಓದುಗರ ಪತ್ರ: ಇಂತಹ ಘಟನೆಗಳು ಮರುಕಳಿಸದಿರಲಿ

ಮೈಸೂರಿನ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ವಾರಾಂತ್ಯ ರಜೆಯ ಪ್ರವಾಸಕ್ಕೆಂದು ಮಂಗಳೂರಿಗೆ ತೆರಳಿದ್ದ ವೇಳೆ ತಾವು ತಂಗಿದ್ದ ಉಳ್ಳಾಲ ಸಮೀಪದ ವಾಸ್ಕೊ ರೆಸಾರ್ಟ್‌ ಈಜುಕೊಳದಲ್ಲಿ ಆಟವಾಡಲು ಹೋಗಿ ಈಜುಬಾರದೆ ಮುಳುಗಿ ಸಾವನ್ನಪ್ಪಿರುವುದು ಬೇಸರದ ಸಂಗತಿ.
ರೆಸಾರ್ಟ್ ನ ಈಜುಕೊಳದಲ್ಲಿ ಯಾವುದೇ ಸುರಕ್ಷತಾ ಪರಿಕರಗಳಿಲ್ಲದಿರುವುದು ಹಾಗೂ ರೆಸಾರ್ಟ್‌ನ ಯಾವ ಸಿಬ್ಬಂದಿಯೂ ಈಜುಕೊಳದ ಸಮೀಪ ಇಲ್ಲದಿರುವುದು ಇವರ ಸಾವಿಗೆ ಕಾರಣ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ.
ನೀರಿನಲ್ಲಿ ಮುಳುಗುವ ವೇಳೆ ಈ ಯುವತಿಯರು ಸಹಾಯಕ್ಕಾಗಿ ಕೂಗಿಕೊಂಡರೂ ರೆಸಾರ್ಟ್‌ನ ಯಾವ ಸಿಬ್ಬಂದಿಯೂ ನೆರವಿಗೆ ಬಾರದಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾವಿಗೆ ರೆಸಾರ್ಟ್‌ನಲ್ಲಿರುವ ಲೋಪಗಳೇ ಕಾರಣ ಎಂದು ಮಂಗಳೂರು ಪೊಲೀಸ್ ಆಯುಕ್ತರು ಹೇಳಿರುವುದಾಗಿ ವರದಿಯಾಗಿದೆ.
ಈಗಾಗಲೇ ಪೊಲೀಸರು ತನಿಖೆ ಆರಂಭಿಸಿದ್ದು, ತನಿಖೆ ವೇಳೆ ರೆಸಾರ್ಟ್, ಮಾಲೀಕರು ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ. ಸದ್ಯ ರೆಸಾರ್ಟ್‌ಗೆ ಬೀಗ ಹಾಕಲಾಗಿದ್ದು, ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅನಧಿಕೃತ ರೆಸಾರ್ಟ್‌ಗಳ ಹಾವಳಿ ಮಂಗಳೂರಿನಲ್ಲಿ ಮಾತ್ರವಲ್ಲದೆ ಎಲ್ಲ ಕಡೆಗಳಲ್ಲಿಯೂ ತಲೆ ಎತ್ತುತ್ತಿದ್ದು, ಇವುಗಳ ಬಗ್ಗೆ ಆಯಾ ಜಿಲ್ಲಾಡಳಿತ ಗಮನಹರಿಸಿ ಅನಧಿಕೃತ ರೆಸಾರ್ಟ್ ಗಳನ್ನು ತೆರವು ಮಾಡಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರವಹಿಸಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

20 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

23 hours ago