Andolana originals

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ.

ಆಧುನಿಕ ಆವಿಷ್ಕಾರಗಳಿಂದ ಬೆಳೆ ಬೆಳೆಯಲು ಸಾಧ್ಯವೇಇಲ್ಲ.ಇದು ಎಲ್ಲರಿಗೂ ತಿಳಿದಿರುವ ವಿಚಾರ ಕೂಡ . ರೈತನನ್ನು ವೇದಿಕೆ ಮೇಲೆ ಹೊಗಳುವುದನ್ನು ಬಿಟ್ಟರೆ. ವಾಸ್ತವದಲ್ಲಿ ರೈತನು ಬೆಳೆದ ಬೆಳೆಗೆ ಸೂಕ್ತ ಬೆಲೆ ಇಲ್ಲದೆ ಆತ ನರಳುವಾಗ ಸ್ಪಂದಿಸುವ ಮನಸ್ಸುಗಳು ತುಂಬಾ ಕಡಿಮೆ. ಇಲ್ಲಿಯ ವರೆಗೂ ಬಂದ ಸರ್ಕಾರಗಳು ರೈತರ ಪರವಾಗಿದ್ದೇವೆ ಎಂದು ಹೇಳುತ್ತಲೇ ಇದ್ದರೂ ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಲೇ ಇವೆ ಹಾಗೂ ಗ್ರಾಮೀಣ ಪ್ರದೇಶದಿಂದ ನಗರಗಳಿಗೆ ವಲಸೆ ಹೋಗುವವರ ಸಂಖ್ಯೆ ಇಳಿಮುಖವಾಗುತ್ತಲೇ ಇಲ್ಲ.

ರೈತನಾಗಿದ್ದರೂ ತನ್ನ ಮಗಳನ್ನು ರೈತನಿಗೆ ಮದುವೆ ಮಾಡಿ ಕೊಡಲು ಹಿಂಜರಿಯುವ ವ್ಯವಸ್ಥೆಯನ್ನು ಕಾಣಬಹುದು. ಕೃಷಿ ಬಗೆಗಿನ ತಾತ್ಸಾರ ಮನೋಭಾವನೆ ಹೋಗಲಾಡಿಸಿ, ಅವರ ಬದುಕು ಬಂಗಾರದಂತೆ ಮಾಡಲು ಸರ್ಕಾರ ಇನ್ನೂ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಬೇಕು. ಜತೆಗೆ ಕೃಷಿ ಕ್ಷೇತ್ರದ ಪ್ರಗತಿಯ ಸಾಧ್ಯತೆ ಮತ್ತು ಅದು ಯಾವುದಕ್ಕೂ ಕಮ್ಮಿ ಇಲ್ಲ ಎಂಬ ಅರಿವು ಹೆಚ್ಚಾಗಬೇಕಾದರೆ ಶಾಲಾ ಶಿಕ್ಷಣದಲ್ಲಿ ಕೃಷಿಯ ಪಠ್ಯವನ್ನು ಅಳವಡಿಸಬೇಕು ಮತ್ತು ಸಣ್ಣ ವಯಸ್ಸಿನಲ್ಲೇ ಮಕ್ಕಳು ಈ ಕ್ಷೇತ್ರದ ಕನಿಷ್ಠ ಜ್ಞಾನ ತಿಳಿಯುವುದು ಅಗತ್ಯವಾಗಿದೆ.

-ಪಿ. ಸಿ. ಕಂಗಾಣಿ ಸೋಮು, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago