Andolana originals

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ.

ಆಧುನಿಕ ಆವಿಷ್ಕಾರಗಳಿಂದ ಬೆಳೆ ಬೆಳೆಯಲು ಸಾಧ್ಯವೇಇಲ್ಲ.ಇದು ಎಲ್ಲರಿಗೂ ತಿಳಿದಿರುವ ವಿಚಾರ ಕೂಡ . ರೈತನನ್ನು ವೇದಿಕೆ ಮೇಲೆ ಹೊಗಳುವುದನ್ನು ಬಿಟ್ಟರೆ. ವಾಸ್ತವದಲ್ಲಿ ರೈತನು ಬೆಳೆದ ಬೆಳೆಗೆ ಸೂಕ್ತ ಬೆಲೆ ಇಲ್ಲದೆ ಆತ ನರಳುವಾಗ ಸ್ಪಂದಿಸುವ ಮನಸ್ಸುಗಳು ತುಂಬಾ ಕಡಿಮೆ. ಇಲ್ಲಿಯ ವರೆಗೂ ಬಂದ ಸರ್ಕಾರಗಳು ರೈತರ ಪರವಾಗಿದ್ದೇವೆ ಎಂದು ಹೇಳುತ್ತಲೇ ಇದ್ದರೂ ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಲೇ ಇವೆ ಹಾಗೂ ಗ್ರಾಮೀಣ ಪ್ರದೇಶದಿಂದ ನಗರಗಳಿಗೆ ವಲಸೆ ಹೋಗುವವರ ಸಂಖ್ಯೆ ಇಳಿಮುಖವಾಗುತ್ತಲೇ ಇಲ್ಲ.

ರೈತನಾಗಿದ್ದರೂ ತನ್ನ ಮಗಳನ್ನು ರೈತನಿಗೆ ಮದುವೆ ಮಾಡಿ ಕೊಡಲು ಹಿಂಜರಿಯುವ ವ್ಯವಸ್ಥೆಯನ್ನು ಕಾಣಬಹುದು. ಕೃಷಿ ಬಗೆಗಿನ ತಾತ್ಸಾರ ಮನೋಭಾವನೆ ಹೋಗಲಾಡಿಸಿ, ಅವರ ಬದುಕು ಬಂಗಾರದಂತೆ ಮಾಡಲು ಸರ್ಕಾರ ಇನ್ನೂ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಬೇಕು. ಜತೆಗೆ ಕೃಷಿ ಕ್ಷೇತ್ರದ ಪ್ರಗತಿಯ ಸಾಧ್ಯತೆ ಮತ್ತು ಅದು ಯಾವುದಕ್ಕೂ ಕಮ್ಮಿ ಇಲ್ಲ ಎಂಬ ಅರಿವು ಹೆಚ್ಚಾಗಬೇಕಾದರೆ ಶಾಲಾ ಶಿಕ್ಷಣದಲ್ಲಿ ಕೃಷಿಯ ಪಠ್ಯವನ್ನು ಅಳವಡಿಸಬೇಕು ಮತ್ತು ಸಣ್ಣ ವಯಸ್ಸಿನಲ್ಲೇ ಮಕ್ಕಳು ಈ ಕ್ಷೇತ್ರದ ಕನಿಷ್ಠ ಜ್ಞಾನ ತಿಳಿಯುವುದು ಅಗತ್ಯವಾಗಿದೆ.

-ಪಿ. ಸಿ. ಕಂಗಾಣಿ ಸೋಮು, ಮೈಸೂರು

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

45 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago