Andolana originals

ಓದುಗರ ಪತ್ರ: ಉಚಿತ ವಿದ್ಯುತ್ ಯೂನಿಟ್ ಹೆಚ್ಚಿಸಲಿ

ರಾಜ್ಯ ಕಾಂಗ್ರೆಸ್ ಸರ್ಕಾರ ‘ಗ್ಯಾರಂಟಿ’ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯಡಿ ಸರ್ಕಾರ ೨೦೦ ಯೂನಿಟ್ ವಿದ್ಯುತ್‌ಅನ್ನು ಉಚಿತವಾಗಿ ನೀಡುತ್ತಿದ್ದು, ಈ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಬೇಕಿದೆ.

ಪ್ರತಿ ಕುಟುಂಬವೂ ಗೃಹಜ್ಯೋತಿ ಯೋಜನೆಯಡಿ ವಾರ್ಷಿಕವಾಗಿ ಬಳಸಿರುವ ವಿದ್ಯುತ್ ಯೂನಿಟ್‌ಗಳ ಆಧಾರದ ಮೇಲೆ ಹೆಚ್ಚುವರಿಯಾಗಿ ಶೇ.೧೦ರಷ್ಟು ವಿದ್ಯುತ್ ಯೂನಿಟ್‌ಗಳನ್ನು ಉಚಿತವಾಗಿ ನೀಡುವುದಾಗಿಯೂ ಸರ್ಕಾರ ತಿಳಿಸಿದೆ. ಸರ್ಕಾರದ ಈ ಕ್ರಮ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲವಾಗಿದೆ. ಆದರೆ ಈ ಹಿಂದೆ ವಾರ್ಷಿಕವಾಗಿ ಕಡಿಮೆ ವಿದ್ಯುತ್ ಬಳಸಿರುವ ಕುಟುಂಬಗಳು ಹೆಚ್ಚುವರಿ ಯಾಗಿ ಬಳಸಿರುವ ಯೂನಿಟ್‌ಗಳಿಗೆ ದರ ಪಾವತಿಸಬೇಕಾಗಿದೆ. ಸರ್ಕಾರ ಗೃಹ ಜ್ಯೋತಿ ಯೋಜನೆ ಜಾರಿಗೊಳಿಸಿದ ಬಳಿಕ ಹಲವು ಬಾರಿ ವಿದ್ಯುತ್ ದರ ಪರಿಷ್ಕರಣೆ ಮಾಡಿದೆ. ಅಲ್ಲದೆ ಇದೇ ಏಪ್ರಿಲ್ ಒಂದರಿಂದ ಪ್ರತಿ ಯೂನಿಟ್‌ಗೆ ಮತ್ತೆ ೩೬ ಪೈಸೆಯನ್ನು ಹೆಚ್ಚಿಸುತ್ತಿದೆ. ಸರ್ಕಾರ ವರ್ಷಕ್ಕೆ ಎರಡು ಮೂರು ಬಾರಿಯಾದರೂ ವಿದ್ಯುತ್ ದರವನ್ನು ಏರಿಸುತ್ತಿದೆಯಾದರೂ ಗೃಹಜ್ಯೋತಿ ಯೋಜನೆಯಡಿ ನೀಡಿರುವ ಯೂನಿಟ್‌ಗಳಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲ. ಆದ್ದರಿಂದ ಸರ್ಕಾರ ನೀಡುತ್ತಿರುವ ಉಚಿತ ಯೂನಿಟ್‌ಗಳನ್ನು ಪರಿಷ್ಕರಿಸಿ ಶೇ.೧೦ರಿಂದ ಶೇ.೨೦ ಯೂನಿಟ್‌ಗಳನ್ನು ಹೆಚ್ಚುವರಿಯಾಗಿ ನೀಡಿದರೆ ಮತ್ತಷ್ಟು ಅನುಕೂಲವಾಗಲಿದೆ. ಸರ್ಕಾರ ಈ ಬಗ್ಗೆ ಯೋಚಿಸಿ ಕಾರ್ಯರೂಪಕ್ಕೆ ತರಲಿ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Recent Posts

ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜನ‌ ಎಂಟ್ರಿ: ವಾಹನ ಸವಾರರಿಗೆ ಢವಢವ

ಮಹಾದೇಶ್‌ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…

17 mins ago

ಎಂ.ಲಕ್ಷ್ಮಣ್‌ ವಿರುದ್ಧ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡಿದ ಶಾಸಕ ಶ್ರೀವತ್ಸ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…

40 mins ago

ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ನೀಡಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…

50 mins ago

ಹಾಸನ: ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿರಾಯ

ಹಾಸನ: ಪತಿ ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಲೂರು ತಾಲ್ಲೂಕಿನ ಯಡೂರು ಗ್ರಾಮದಲ್ಲಿ…

57 mins ago

ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮುಡಾ ಸೈಟ್‌ ಹಂಚಿಕೆ ಪ್ರಕರಣ: ಜ.22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ…

1 hour ago

ಗುಂಡ್ಲುಪೇಟೆ: ದಾರಿತಪ್ಪಿ ಬಂದಿದ್ದ ಜಿಂಕೆ ರಕ್ಷಣೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣಕ್ಕೆ ದಾರಿ ತಪ್ಪಿ ಬಂದಿದ್ದ ಜಿಂಕೆಯೊಂದನ್ನು ನಿವಾಸಿಗಳು ರಕ್ಷಣೆ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.…

1 hour ago