Andolana originals

ಓದುಗರ ಪತ್ರ: ಬಿಜೆಪಿಯಲ್ಲಿ ಹೆಚ್ಚಿದ ಆಂತರಿಕ ಗೊಂದಲ

ನಮ್ಮದು ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುತ್ತಿದ್ದ ಬಿಜೆಪಿ ಈಗ ರಾಜ್ಯದ ಮಟ್ಟಿಗಂತೂ ಒಡೆದ ಹೋಗಿರುವ ಮನೆಯಾಗಿದೆ. ಆಂತರಿಕವಾಗಿ ಎರಡು ಬಣಗಳಾಗಿ ಒಡೆದುಹೋಗಿರುವ ಬಿಜೆಪಿಯಲ್ಲಿ ಎರಡೂ ಬಣಗಳ ನಡುವಿನ ಮುಸುಕಿನ ಗುದ್ದಾಟ ರಾಜ್ಯದಲ್ಲಿ ಬಿಜೆಪಿ ವರ್ಚಸ್ಸಿಗೆ ಕುತ್ತು ತಂದಿದೆ.

ಈ ಎರಡೂ ಬಣಗಳ ಪ್ರಮುಖರು ತಮ್ಮ ಪಕ್ಷದ ಆಂತರಿಕ ಸಮಸ್ಯೆಗಳನ್ನು ಸಾರ್ವಜನಿಕ ವೇದಿಕೆಗಳಲ್ಲಿ ಪ್ರಸ್ತಾಪಿಸುತ್ತಿರುವುದು ವಿರೋಧ ಪಕ್ಷಗಳಿಗೆ ಆಹಾರವಾಗಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರಂತೂ ಪಕ್ಷದ ಹೈಕಮಾಂಡ್‌ಗೂ ಡೋಟ್ ಕೇರ್ ಎನ್ನುವಂತೆ ವರ್ತಿಸುತ್ತಿದ್ದು, ಇವರ ವರ್ತನೆಗೆ ಬ್ರೇಕ್ ಹಾಕಲು ಹೈಕಮಾಂಡ್ ವಿಫಲವಾಗಿದೆಯೇನೋ ಅನಿಸುತ್ತದೆ. ಇಲ್ಲವೇ ಹೈಕಮಾಂಡ್ ಪರೋಕ್ಷವಾಗಿ ಯತ್ನಾಳ್‌ರ ಬೆಂಬಲಕ್ಕೆ ನಿಂತಿರಬಹುದು ಎಂಬ ಅನುಮಾನ ಶುರುವಾಗಿದೆ.

ಯತ್ನಾಳ್ ತಮ್ಮದೇ ಪಕ್ಷದ ಮುಖಂಡರ ವಿರುದ್ಧ ಬಹಿರಂಗ ವೇದಿಕೆಗಳಲ್ಲಿ ಹೇಳಿಕೆ ನೀಡುತ್ತಿದ್ದು, ನಿಮ್ಮ ರಹಸ್ಯವನ್ನೆಲ್ಲ ಬಿಚ್ಚಿಡುತ್ತೇನೆ ಎಂಬ ಎಚ್ಚರಿಕೆ ನೀಡಿದ್ದಾರೆ. ಇದರಿಂದಾಗಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಹೈಕಮಾಂಡ್ ಮಧ್ಯ ಪ್ರವೇಶಿಸಿ ಈ ಒಳ ಜಗಳವನ್ನು ತಣ್ಣಗಾಗಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಭಾರಿ ದಂಡ ತೆರಬೇಕಾಗುತ್ತದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

 

andolana

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

1 hour ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

4 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

6 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

6 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

6 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

7 hours ago