Andolana originals

ಓದುಗರ ಪತ್ರ: ಬಿಜೆಪಿಯಲ್ಲಿ ಹೆಚ್ಚಿದ ಆಂತರಿಕ ಗೊಂದಲ

ನಮ್ಮದು ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುತ್ತಿದ್ದ ಬಿಜೆಪಿ ಈಗ ರಾಜ್ಯದ ಮಟ್ಟಿಗಂತೂ ಒಡೆದ ಹೋಗಿರುವ ಮನೆಯಾಗಿದೆ. ಆಂತರಿಕವಾಗಿ ಎರಡು ಬಣಗಳಾಗಿ ಒಡೆದುಹೋಗಿರುವ ಬಿಜೆಪಿಯಲ್ಲಿ ಎರಡೂ ಬಣಗಳ ನಡುವಿನ ಮುಸುಕಿನ ಗುದ್ದಾಟ ರಾಜ್ಯದಲ್ಲಿ ಬಿಜೆಪಿ ವರ್ಚಸ್ಸಿಗೆ ಕುತ್ತು ತಂದಿದೆ.

ಈ ಎರಡೂ ಬಣಗಳ ಪ್ರಮುಖರು ತಮ್ಮ ಪಕ್ಷದ ಆಂತರಿಕ ಸಮಸ್ಯೆಗಳನ್ನು ಸಾರ್ವಜನಿಕ ವೇದಿಕೆಗಳಲ್ಲಿ ಪ್ರಸ್ತಾಪಿಸುತ್ತಿರುವುದು ವಿರೋಧ ಪಕ್ಷಗಳಿಗೆ ಆಹಾರವಾಗಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರಂತೂ ಪಕ್ಷದ ಹೈಕಮಾಂಡ್‌ಗೂ ಡೋಟ್ ಕೇರ್ ಎನ್ನುವಂತೆ ವರ್ತಿಸುತ್ತಿದ್ದು, ಇವರ ವರ್ತನೆಗೆ ಬ್ರೇಕ್ ಹಾಕಲು ಹೈಕಮಾಂಡ್ ವಿಫಲವಾಗಿದೆಯೇನೋ ಅನಿಸುತ್ತದೆ. ಇಲ್ಲವೇ ಹೈಕಮಾಂಡ್ ಪರೋಕ್ಷವಾಗಿ ಯತ್ನಾಳ್‌ರ ಬೆಂಬಲಕ್ಕೆ ನಿಂತಿರಬಹುದು ಎಂಬ ಅನುಮಾನ ಶುರುವಾಗಿದೆ.

ಯತ್ನಾಳ್ ತಮ್ಮದೇ ಪಕ್ಷದ ಮುಖಂಡರ ವಿರುದ್ಧ ಬಹಿರಂಗ ವೇದಿಕೆಗಳಲ್ಲಿ ಹೇಳಿಕೆ ನೀಡುತ್ತಿದ್ದು, ನಿಮ್ಮ ರಹಸ್ಯವನ್ನೆಲ್ಲ ಬಿಚ್ಚಿಡುತ್ತೇನೆ ಎಂಬ ಎಚ್ಚರಿಕೆ ನೀಡಿದ್ದಾರೆ. ಇದರಿಂದಾಗಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಹೈಕಮಾಂಡ್ ಮಧ್ಯ ಪ್ರವೇಶಿಸಿ ಈ ಒಳ ಜಗಳವನ್ನು ತಣ್ಣಗಾಗಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಭಾರಿ ದಂಡ ತೆರಬೇಕಾಗುತ್ತದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

 

andolana

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

13 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

13 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

13 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

13 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

13 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

16 hours ago