Andolana originals

ಓದುಗರ ಪತ್ರ: ಬಿಜೆಪಿಯಲ್ಲಿ ಹೆಚ್ಚಿದ ಆಂತರಿಕ ಗೊಂದಲ

ನಮ್ಮದು ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುತ್ತಿದ್ದ ಬಿಜೆಪಿ ಈಗ ರಾಜ್ಯದ ಮಟ್ಟಿಗಂತೂ ಒಡೆದ ಹೋಗಿರುವ ಮನೆಯಾಗಿದೆ. ಆಂತರಿಕವಾಗಿ ಎರಡು ಬಣಗಳಾಗಿ ಒಡೆದುಹೋಗಿರುವ ಬಿಜೆಪಿಯಲ್ಲಿ ಎರಡೂ ಬಣಗಳ ನಡುವಿನ ಮುಸುಕಿನ ಗುದ್ದಾಟ ರಾಜ್ಯದಲ್ಲಿ ಬಿಜೆಪಿ ವರ್ಚಸ್ಸಿಗೆ ಕುತ್ತು ತಂದಿದೆ.

ಈ ಎರಡೂ ಬಣಗಳ ಪ್ರಮುಖರು ತಮ್ಮ ಪಕ್ಷದ ಆಂತರಿಕ ಸಮಸ್ಯೆಗಳನ್ನು ಸಾರ್ವಜನಿಕ ವೇದಿಕೆಗಳಲ್ಲಿ ಪ್ರಸ್ತಾಪಿಸುತ್ತಿರುವುದು ವಿರೋಧ ಪಕ್ಷಗಳಿಗೆ ಆಹಾರವಾಗಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರಂತೂ ಪಕ್ಷದ ಹೈಕಮಾಂಡ್‌ಗೂ ಡೋಟ್ ಕೇರ್ ಎನ್ನುವಂತೆ ವರ್ತಿಸುತ್ತಿದ್ದು, ಇವರ ವರ್ತನೆಗೆ ಬ್ರೇಕ್ ಹಾಕಲು ಹೈಕಮಾಂಡ್ ವಿಫಲವಾಗಿದೆಯೇನೋ ಅನಿಸುತ್ತದೆ. ಇಲ್ಲವೇ ಹೈಕಮಾಂಡ್ ಪರೋಕ್ಷವಾಗಿ ಯತ್ನಾಳ್‌ರ ಬೆಂಬಲಕ್ಕೆ ನಿಂತಿರಬಹುದು ಎಂಬ ಅನುಮಾನ ಶುರುವಾಗಿದೆ.

ಯತ್ನಾಳ್ ತಮ್ಮದೇ ಪಕ್ಷದ ಮುಖಂಡರ ವಿರುದ್ಧ ಬಹಿರಂಗ ವೇದಿಕೆಗಳಲ್ಲಿ ಹೇಳಿಕೆ ನೀಡುತ್ತಿದ್ದು, ನಿಮ್ಮ ರಹಸ್ಯವನ್ನೆಲ್ಲ ಬಿಚ್ಚಿಡುತ್ತೇನೆ ಎಂಬ ಎಚ್ಚರಿಕೆ ನೀಡಿದ್ದಾರೆ. ಇದರಿಂದಾಗಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಹೈಕಮಾಂಡ್ ಮಧ್ಯ ಪ್ರವೇಶಿಸಿ ಈ ಒಳ ಜಗಳವನ್ನು ತಣ್ಣಗಾಗಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಭಾರಿ ದಂಡ ತೆರಬೇಕಾಗುತ್ತದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

 

andolana

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

5 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

18 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

18 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

18 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

18 hours ago