Andolana originals

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ ತೀರ್ಮಾನ ಕೈಗೊಂಡಿರುವುದು ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಲ್ಲಿ ಸಂತಸ ತಂದಿದೆ.

ಹಲವಾರು ಪದವಿಗಳನ್ನು ಪಡೆದುಕೊಂಡರೂ ಕೆಲವೊಮ್ಮೆ ಅರ್ಹತಾ ಪರೀಕ್ಷೆಯಲ್ಲಿ ಅನ್ನುತ್ತೀರ್ಣಗೊಂಡು ನಿರಾಸೆಗೆ ಒಳಗಾಗುತ್ತಿದ್ದರು. ವಯೋಮಿತಿ ಮೀರಿದಾಗ ಸರ್ಕಾರಿ ಕೆಲಸದ ನಿರೀಕ್ಷೆ ಯಲ್ಲಿದ್ದವರು ಅವಕಾಶ ಕೈಮೀರಿತು ಎಂಬ ಕಾರಣಕ್ಕೆ ಮಾನಸಿಕವಾಗಿ ಕುಗ್ಗಿ ಹೋಗುತ್ತಿದ್ದರು. ಯಾವುದೇ ಕೌಶಲವಿದ್ದರೂ ಸಾಲಕ್ಕೆ ಹೆದರಿ ಸ್ವಯಂ ಉದ್ಯೋಗ ಕೈಗೊಳ್ಳಲು ಹಿಂಜರಿಯುವವರೂ ಇದ್ದಾರೆ. ಇದೀಗ ರಾಜ್ಯ ಸರ್ಕಾರ ಸರ್ಕಾರಿ ನೌಕರಿ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ ನೀಡಿದೆ. ತಮ್ಮ ಪ್ರಯತ್ನದಿಂದ ಸರ್ಕಾರಿ ಕೆಲಸ ಗಿಟ್ಟಿಸಿಕೊಳ್ಳಲು ಅವಕಾಶ ಮಾಡಿ ಕೊಟ್ಟಿದೆ. ಹೆಣ್ಣು ಮಕ್ಕಳಿಗೂ ಈ ಯೋಜನೆ ತುಂಬಾ ಅನುಕೂಲಕರವಾಗಿದೆ. ಸ್ವಾವಲಂಬನೆ ಮತ್ತು ಕುಟುಂಬಕ್ಕೆ ಸಹಕಾರ ನೀಡಲು ಉತ್ತೇಜನ ನೀಡಿದಂತಾಗಿದೆ.

– ಎಂ. ಎಸ್. ಉಷಾ ಪ್ರಕಾಶ್, ಎಸ್‌ಬಿಎಂ ಕಾಲೋನಿ, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

6 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

7 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

8 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

8 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

9 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

10 hours ago