ಓದುಗರ ಪತ್ರ
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ ತೀರ್ಮಾನ ಕೈಗೊಂಡಿರುವುದು ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಲ್ಲಿ ಸಂತಸ ತಂದಿದೆ.
ಹಲವಾರು ಪದವಿಗಳನ್ನು ಪಡೆದುಕೊಂಡರೂ ಕೆಲವೊಮ್ಮೆ ಅರ್ಹತಾ ಪರೀಕ್ಷೆಯಲ್ಲಿ ಅನ್ನುತ್ತೀರ್ಣಗೊಂಡು ನಿರಾಸೆಗೆ ಒಳಗಾಗುತ್ತಿದ್ದರು. ವಯೋಮಿತಿ ಮೀರಿದಾಗ ಸರ್ಕಾರಿ ಕೆಲಸದ ನಿರೀಕ್ಷೆ ಯಲ್ಲಿದ್ದವರು ಅವಕಾಶ ಕೈಮೀರಿತು ಎಂಬ ಕಾರಣಕ್ಕೆ ಮಾನಸಿಕವಾಗಿ ಕುಗ್ಗಿ ಹೋಗುತ್ತಿದ್ದರು. ಯಾವುದೇ ಕೌಶಲವಿದ್ದರೂ ಸಾಲಕ್ಕೆ ಹೆದರಿ ಸ್ವಯಂ ಉದ್ಯೋಗ ಕೈಗೊಳ್ಳಲು ಹಿಂಜರಿಯುವವರೂ ಇದ್ದಾರೆ. ಇದೀಗ ರಾಜ್ಯ ಸರ್ಕಾರ ಸರ್ಕಾರಿ ನೌಕರಿ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ ನೀಡಿದೆ. ತಮ್ಮ ಪ್ರಯತ್ನದಿಂದ ಸರ್ಕಾರಿ ಕೆಲಸ ಗಿಟ್ಟಿಸಿಕೊಳ್ಳಲು ಅವಕಾಶ ಮಾಡಿ ಕೊಟ್ಟಿದೆ. ಹೆಣ್ಣು ಮಕ್ಕಳಿಗೂ ಈ ಯೋಜನೆ ತುಂಬಾ ಅನುಕೂಲಕರವಾಗಿದೆ. ಸ್ವಾವಲಂಬನೆ ಮತ್ತು ಕುಟುಂಬಕ್ಕೆ ಸಹಕಾರ ನೀಡಲು ಉತ್ತೇಜನ ನೀಡಿದಂತಾಗಿದೆ.
– ಎಂ. ಎಸ್. ಉಷಾ ಪ್ರಕಾಶ್, ಎಸ್ಬಿಎಂ ಕಾಲೋನಿ, ಮೈಸೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…