೨೦೨೮ – ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ ತಜ್ಞ ವೈದ್ಯರ ಕೊರತೆ ನೀಗಿಸಲು ಕೇಂದ್ರ ಸರ್ಕಾರ ಅನು ಮೋದನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರು ಲೋಕಸಭೆಗೆ ಮಾಹಿತಿ ನೀಡಿರುವುದು ಪ್ರಶಂಸನೀಯ.
ಪ್ರಸ್ತುತ ದೇಶದಲ್ಲಿ ೮೬,೩೬೦ ಪಿಜಿ ಸೀಟುಗಳು ಲಭ್ಯವಿದ್ದು ೫,೦೦೦ ಹೆಚ್ಚು ಸೀಟುಗಳ ಸೇರ್ಪಡೆಯಿಂದಾಗಿ ೯೧,೩೬೦ ಸೀಟುಗಳಿಗೆ ತಲುಪಲಿದೆ ಹಾಗೂ ೫,೦೨೩ ಎಂಬಿಬಿಎಸ್ ಸೀಟುಗಳನ್ನು ಹಂತ ಹಂತವಾಗಿ ಸೇರ್ಪಡೆಗೊಳಿಸಲು ಗುರಿ ಹೊಂದಿರುವುದಾಗಿ ತಿಳಿಸಿರುವುದು ಸ್ವಾಗತಾರ್ಹ. ದೇಶದಲ್ಲಿ ಪಿಜಿ ಸೀಟುಗಳ ಹಾಗೂ ಎಂಬಿಬಿಎಸ್ ಸೀಟುಗಳ ಪೈಕಿ ಅತಿಹೆಚ್ಚು ಸೀಟುಗಳು ಕರ್ನಾಟಕದಲ್ಲಿ ಇರುವುದು ಒಳ್ಳೆಯ ಬೆಳವಣೆಗೆ. ಈ ಹೆಚ್ಚುವರಿ ಸೀಟುಗಳ ಲಭ್ಯತೆಯಿಂದ ವೈದ್ಯಕೀಯ ಪದವಿ ಆಕಾಂಕ್ಷಿಗಳಿಗೆ ಹೆಚ್ಚಿನ ಅವಕಾಶ ಸಿಗುವುದರ ಜೊತೆಗೆ ಗ್ರಾಮೀಣ ಹಾಗೂ ಸಣ್ಣ ನಗರಗಳಲ್ಲಿ ವೈದ್ಯರ ಲಭ್ಯತೆ ಹೆಚ್ಚಾಗಿ ಜನತೆಗೆ ಅನುಕೂಲವಾಗಲಿ.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…
ದಿನೇಶ್ ಕುಮಾರ್ ಎಚ್.ಎಸ್. ಮೈಸೂರು: ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಡುವೆಯೂ ಕೆಂಪು ಸುಂದರಿ ಟೊಮ್ಯಾಟೋ ಬೆಲೆ ಪಾತಾಳಕ್ಕಿಳಿದಿದೆ. ಕಳೆದ…