Andolana originals

ಓದುಗರ ಪತ್ರ: ಇಎಸ್‌ಐಸಿ ವೈದ್ಯಕೀಯ ಕಾಲೇಜುಗಳಲ್ಲಿ ಐಪಿ ಕೋಟಾ ಹೆಚ್ಚಿಸಿ

ದೇಶದಲ್ಲಿ ಪ್ರಸ್ತುತ ಇಎಸ್‌ಐಸಿ ವೈದ್ಯಕೀಯ ಕಾಲೇಜುಗಳಲ್ಲಿ ಇನ್ಶೂರೆಡ್ ಪರ್ಸನ್ (ಐಪಿ) ಕೋಟಾ ಪ್ರಮಾಣ ಕೇವಲ ೩೫% ರಷ್ಟೇ ಇದೆ. ಇಎಸ್‌ಐ ಯೋಜನೆಯು ದೇಶದಾದ್ಯಂತ ಲಕ್ಷಾಂತರ ಉದ್ಯೋಗಿಗಳು ಮತ್ತು ಅವರ ಕುಟುಂಬ ಸದಸ್ಯರನ್ನು ಒಳಗೊಂಡಿರುವುದರಿಂದ, ಈ ಪ್ರಮಾಣವು ಅತೀ ಕಡಿಮೆಯಾಗಿದೆ.

ಇಎಸ್‌ಐ ಯೋಜನೆಗೆ ಕಾರ್ಮಿಕರು ತಮ್ಮ ಮಾಸಿಕ ವೇತನದ ಒಂದು ಭಾಗವನ್ನು ಪಾವತಿಸುವ ಮೂಲಕ ನೇರವಾಗಿ ಕೊಡುಗೆ ನೀಡುತ್ತಾರೆ. ಆದ್ದರಿಂದ, ಅವರ ಮಕ್ಕಳಿಗೆ ವೈದ್ಯಕೀಯ ಶಿಕ್ಷಣದ ಹೆಚ್ಚಿನ ಅವಕಾಶ ಒದಗಿಸುವುದು ನ್ಯಾಯಯುತ ಹಾಗೂ ಸಾಮಾಜಿಕ ಸಮಾನತೆಯ ದೃಷ್ಟಿಯಿಂದ ಅತ್ಯಗತ್ಯ. ಇದೇ ವೇಳೆ, ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಮಿಕ ವರ್ಗದ ಮಕ್ಕಳ ಪ್ರತಿನಿಽತ್ವ ಅತ್ಯಲ್ಪವಾಗಿರುವುದು ಬೇಸರದ ಸಂಗತಿಯಾಗಿದೆ.

ಪ್ರಸ್ತುತ ಇರುವ ಐಪಿ ಕೋಟಾವನ್ನು ೩೫%ರಿಂದ ಕನಿಷ್ಠ ೪೫% ರಷ್ಟು ಹೆಚ್ಚಿಸುವುದು ಸಮಯೋಚಿತ ಮತ್ತು ನ್ಯಾಯಸಮ್ಮತವಾದ ಕ್ರಮವಾಗುತ್ತದೆ. ಇದು ಕಾರ್ಮಿಕ ಕುಟುಂಬಗಳ ಶೈಕ್ಷಣಿಕ ಮತ್ತು ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿದ್ದು, ವೈದ್ಯಕೀಯ ಶಿಕ್ಷಣದಲ್ಲಿ ಸಮಾನ ಅವಕಾಶ ಮತ್ತು ಸಾಮಾಜಿಕ ನ್ಯಾಯದ ಆದರ್ಶವನ್ನು ಬೆಂಬಲಿಸುತ್ತದೆ. ಹೀಗಾಗಿ, ಕೇಂದ್ರ ಸರ್ಕಾರ ಮತ್ತು ಇಎಸ್‌ಐಸಿ ಆಡಳಿತ ಮಂಡಳಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಮುಂದಿನ ಶೈಕ್ಷಣಿಕ ವರ್ಷದಿಂದಲೇ ಐಪಿ ಕೋಟಾ ಪ್ರಮಾಣವನ್ನು ಹೆಚ್ಚಿಸುವ ಕ್ರಮ ಕೈಗೊಳ್ಳುವುದು ಅತ್ಯಗತ್ಯ.

– ಡಾ. ಎಚ್. ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

5 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago