Andolana originals

ಓದುಗರ ಪತ್ರ: ಮೈಸೂರು ಆಕಾಶವಾಣಿ ಪ್ರಸರಣ ಸಾಮರ್ಥ್ಯ ಹೆಚ್ಚಿಸಿ

ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ ಮಾಧ್ಯಮವಾಗಿದೆ. ಕೇಂದ್ರ ಸರ್ಕಾರದ ಸ್ವಾಧೀನದಲ್ಲಿರುವ ಆಕಾಶವಾಣಿ ಮೈಸೂರು ಕೇಂದ್ರವು ಸದ್ಯ ೫ ಕಿಲೋ ವ್ಯಾಟ್ ಸಾಮರ್ಥ್ಯದಲ್ಲಿ ಕಾರ್ಯಕ್ರಮ ಪ್ರಸಾರ ಮಾಡುತ್ತಿದೆ. ಈಗ ೧೦ ಕಿಲೋ ವ್ಯಾಟ್ ಸಾಮರ್ಥ್ಯದಲ್ಲಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲು ಪ್ರಸಾರ ಭಾರತಿಯಿಂದ ಅನುಮತಿ ದೊರೆತಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಮೈಸೂರಿನ ಯಾದವ ಗಿರಿಯಲ್ಲಿರುವ ಆಕಾಶವಾಣಿ ಕೇಂದ್ರ ಕೇವಲ ೧೦೦ ಮೀಟರ್ ಎತ್ತರದಲ್ಲಿದೆ, ಇದನ್ನು ಯಾದವಗಿರಿಯಿಂದ, ೧೫೦ ಮೀಟರ್ ಎತ್ತರದ ಟವರ್ ಇರುವ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸ್ಥಳಾಂತರಿಸಿದರೆ, ತಮಿಳು ನಾಡು ಮತ್ತು ಕೇರಳ ಗಡಿಭಾಗದ ಕನ್ನಡಿಗರು ಕೂಡ ಮೈಸೂರು ಆಕಾಶವಾಣಿಯ ಗುಣಮಟ್ಟದ ಕಾರ್ಯಕ್ರಮವನ್ನು ಕೇಳಬಹುದು.

ಭದ್ರಾವತಿ ಆಕಾಶವಾಣಿ ಕೇಂದ್ರದ ಪ್ರಸಾರ ಸಾಮರ್ಥ್ಯವನ್ನು ಇತ್ತೀಚೆಗೆ ಹೆಚ್ಚಳ ಮಾಡಿದ್ದು, ಇದೇ ಮಾದರಿಯಲ್ಲಿ ಮೈಸೂರು ಆಕಾಶವಾಣಿ ಕೇಂದ್ರದ ಸಾಮರ್ಥ್ಯವನ್ನೂ ಹೆಚ್ಚಿಸಲು ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಕ್ರಮ ಕೈಗೊಳ್ಳುವುದು ಅಗತ್ಯ.

 -ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ನಾಳೆಯಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರ: ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್‌

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ…

19 mins ago

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…

2 hours ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…

2 hours ago

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

3 hours ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

3 hours ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

3 hours ago