ಓದುಗರ ಪತ್ರ
ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ ಮಾಧ್ಯಮವಾಗಿದೆ. ಕೇಂದ್ರ ಸರ್ಕಾರದ ಸ್ವಾಧೀನದಲ್ಲಿರುವ ಆಕಾಶವಾಣಿ ಮೈಸೂರು ಕೇಂದ್ರವು ಸದ್ಯ ೫ ಕಿಲೋ ವ್ಯಾಟ್ ಸಾಮರ್ಥ್ಯದಲ್ಲಿ ಕಾರ್ಯಕ್ರಮ ಪ್ರಸಾರ ಮಾಡುತ್ತಿದೆ. ಈಗ ೧೦ ಕಿಲೋ ವ್ಯಾಟ್ ಸಾಮರ್ಥ್ಯದಲ್ಲಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲು ಪ್ರಸಾರ ಭಾರತಿಯಿಂದ ಅನುಮತಿ ದೊರೆತಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಮೈಸೂರಿನ ಯಾದವ ಗಿರಿಯಲ್ಲಿರುವ ಆಕಾಶವಾಣಿ ಕೇಂದ್ರ ಕೇವಲ ೧೦೦ ಮೀಟರ್ ಎತ್ತರದಲ್ಲಿದೆ, ಇದನ್ನು ಯಾದವಗಿರಿಯಿಂದ, ೧೫೦ ಮೀಟರ್ ಎತ್ತರದ ಟವರ್ ಇರುವ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸ್ಥಳಾಂತರಿಸಿದರೆ, ತಮಿಳು ನಾಡು ಮತ್ತು ಕೇರಳ ಗಡಿಭಾಗದ ಕನ್ನಡಿಗರು ಕೂಡ ಮೈಸೂರು ಆಕಾಶವಾಣಿಯ ಗುಣಮಟ್ಟದ ಕಾರ್ಯಕ್ರಮವನ್ನು ಕೇಳಬಹುದು.
ಭದ್ರಾವತಿ ಆಕಾಶವಾಣಿ ಕೇಂದ್ರದ ಪ್ರಸಾರ ಸಾಮರ್ಥ್ಯವನ್ನು ಇತ್ತೀಚೆಗೆ ಹೆಚ್ಚಳ ಮಾಡಿದ್ದು, ಇದೇ ಮಾದರಿಯಲ್ಲಿ ಮೈಸೂರು ಆಕಾಶವಾಣಿ ಕೇಂದ್ರದ ಸಾಮರ್ಥ್ಯವನ್ನೂ ಹೆಚ್ಚಿಸಲು ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಕ್ರಮ ಕೈಗೊಳ್ಳುವುದು ಅಗತ್ಯ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…