ಓದುಗರ ಪತ್ರ
ಕನ್ನಡ ಚಿತ್ರರಂಗ ಕಂಡ ಅತ್ಯಂತ ಪ್ರತಿಭಾವಂತ ನಟರಾದ ಡಾ.ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ಮರ ಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು.ಡಾ. ವಿಷ್ಣುವರ್ಧನ್ ನಟಿಸಿದ್ದ ಎಷ್ಟೋ ಚಲನಚಿತ್ರ ಗಳು ಇಂದಿಗೂ ಕನ್ನಡ ಚಿತ್ರರಂಗದಲ್ಲಿ ಮೈಲಿ ಗಲ್ಲಾಗಿ ಉಳಿದಿವೆ.
ವಿಷ್ಣುವರ್ಧನ್ ನಿಧನರಾಗಿ ಹದಿನಾರು ವರ್ಷಗಳ ನಂತರ ಅವರಿಗೆ ಮರ ಣೋತ್ತರವಾಗಿ ಪ್ರಶಸ್ತಿ ನೀಡಿದ್ದು ಸಿದ್ದರಾಮಯ್ಯ ಸರ್ಕಾರ ಮಾಡಿದ ಅಪರೂಪದ ಒಳ್ಳೆಯ ಕೆಲಸಗಳಲ್ಲಿ ಒಂದಾಗಿದೆ. ಕಡೆಗೂ ಭಾರತೀ ವಿಷ್ಣುವರ್ಧನ್, ಅನಿರುದ್ಧ ವಿಷ್ಣುವರ್ಧನ್, ವಿಷ್ಣುವರ್ಧನ್ ಕುಟುಂಬ ಹಾಗೂ ಅವರ ಲಕ್ಷಾಂತರ ಅಭಿಮಾನಿಗಳು, ಅಂತೆಯೇ ಕನ್ನಡ ಚಿತ್ರ ಅಭಿಮಾನಿಗಳಿಗೆ ಸಂತಸದ ಕ್ಷಣ ಇದಾಗಿದೆ. ಅಭಿಜಾತ ಕಲಾವಿದೆ ಬಿ. ಸರೋಜಾದೇವಿ ಅವರಿಗೂ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಸಿಕ್ಕಿರುವುದು ಸಂತಸದ ವಿಚಾರ.
ಅವರು ನಟಿಸಿರುವ ಸಾಕಷ್ಟು ಚಿತ್ರಗಳು ಅವರ ಅಭಿನಯವನ್ನು ಇಂದಿಗೂ ನೆನಪಿಗೆ ತರುತ್ತವೆ. ಅತ್ಯಂತ ಯೋಗ್ಯ ವ್ಯಕ್ತಿಗಳಿಗೆ ಸಿಕ್ಕ ಕರ್ನಾಟಕ ರತ್ನ ಪ್ರಶಸ್ತಿ ತನ್ನ ಮೌಲ್ಯವನ್ನು ಹೆಚ್ಚಿಸಿಕೊಂಡಿದೆ.
-ಶಿವಮೊಗ್ಗ ನಾ. ದಿನೇಶ್ ಅಡಿಗ,ಮೈಸೂರು
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…