ಓದುಗರ ಪತ್ರ
ಕನ್ನಡ ಚಿತ್ರರಂಗ ಕಂಡ ಅತ್ಯಂತ ಪ್ರತಿಭಾವಂತ ನಟರಾದ ಡಾ.ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ಮರ ಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು.ಡಾ. ವಿಷ್ಣುವರ್ಧನ್ ನಟಿಸಿದ್ದ ಎಷ್ಟೋ ಚಲನಚಿತ್ರ ಗಳು ಇಂದಿಗೂ ಕನ್ನಡ ಚಿತ್ರರಂಗದಲ್ಲಿ ಮೈಲಿ ಗಲ್ಲಾಗಿ ಉಳಿದಿವೆ.
ವಿಷ್ಣುವರ್ಧನ್ ನಿಧನರಾಗಿ ಹದಿನಾರು ವರ್ಷಗಳ ನಂತರ ಅವರಿಗೆ ಮರ ಣೋತ್ತರವಾಗಿ ಪ್ರಶಸ್ತಿ ನೀಡಿದ್ದು ಸಿದ್ದರಾಮಯ್ಯ ಸರ್ಕಾರ ಮಾಡಿದ ಅಪರೂಪದ ಒಳ್ಳೆಯ ಕೆಲಸಗಳಲ್ಲಿ ಒಂದಾಗಿದೆ. ಕಡೆಗೂ ಭಾರತೀ ವಿಷ್ಣುವರ್ಧನ್, ಅನಿರುದ್ಧ ವಿಷ್ಣುವರ್ಧನ್, ವಿಷ್ಣುವರ್ಧನ್ ಕುಟುಂಬ ಹಾಗೂ ಅವರ ಲಕ್ಷಾಂತರ ಅಭಿಮಾನಿಗಳು, ಅಂತೆಯೇ ಕನ್ನಡ ಚಿತ್ರ ಅಭಿಮಾನಿಗಳಿಗೆ ಸಂತಸದ ಕ್ಷಣ ಇದಾಗಿದೆ. ಅಭಿಜಾತ ಕಲಾವಿದೆ ಬಿ. ಸರೋಜಾದೇವಿ ಅವರಿಗೂ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಸಿಕ್ಕಿರುವುದು ಸಂತಸದ ವಿಚಾರ.
ಅವರು ನಟಿಸಿರುವ ಸಾಕಷ್ಟು ಚಿತ್ರಗಳು ಅವರ ಅಭಿನಯವನ್ನು ಇಂದಿಗೂ ನೆನಪಿಗೆ ತರುತ್ತವೆ. ಅತ್ಯಂತ ಯೋಗ್ಯ ವ್ಯಕ್ತಿಗಳಿಗೆ ಸಿಕ್ಕ ಕರ್ನಾಟಕ ರತ್ನ ಪ್ರಶಸ್ತಿ ತನ್ನ ಮೌಲ್ಯವನ್ನು ಹೆಚ್ಚಿಸಿಕೊಂಡಿದೆ.
-ಶಿವಮೊಗ್ಗ ನಾ. ದಿನೇಶ್ ಅಡಿಗ,ಮೈಸೂರು
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…