ಓದುಗರ ಪತ್ರ
ಕನ್ನಡ ಚಿತ್ರರಂಗ ಕಂಡ ಅತ್ಯಂತ ಪ್ರತಿಭಾವಂತ ನಟರಾದ ಡಾ.ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ಮರ ಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು.ಡಾ. ವಿಷ್ಣುವರ್ಧನ್ ನಟಿಸಿದ್ದ ಎಷ್ಟೋ ಚಲನಚಿತ್ರ ಗಳು ಇಂದಿಗೂ ಕನ್ನಡ ಚಿತ್ರರಂಗದಲ್ಲಿ ಮೈಲಿ ಗಲ್ಲಾಗಿ ಉಳಿದಿವೆ.
ವಿಷ್ಣುವರ್ಧನ್ ನಿಧನರಾಗಿ ಹದಿನಾರು ವರ್ಷಗಳ ನಂತರ ಅವರಿಗೆ ಮರ ಣೋತ್ತರವಾಗಿ ಪ್ರಶಸ್ತಿ ನೀಡಿದ್ದು ಸಿದ್ದರಾಮಯ್ಯ ಸರ್ಕಾರ ಮಾಡಿದ ಅಪರೂಪದ ಒಳ್ಳೆಯ ಕೆಲಸಗಳಲ್ಲಿ ಒಂದಾಗಿದೆ. ಕಡೆಗೂ ಭಾರತೀ ವಿಷ್ಣುವರ್ಧನ್, ಅನಿರುದ್ಧ ವಿಷ್ಣುವರ್ಧನ್, ವಿಷ್ಣುವರ್ಧನ್ ಕುಟುಂಬ ಹಾಗೂ ಅವರ ಲಕ್ಷಾಂತರ ಅಭಿಮಾನಿಗಳು, ಅಂತೆಯೇ ಕನ್ನಡ ಚಿತ್ರ ಅಭಿಮಾನಿಗಳಿಗೆ ಸಂತಸದ ಕ್ಷಣ ಇದಾಗಿದೆ. ಅಭಿಜಾತ ಕಲಾವಿದೆ ಬಿ. ಸರೋಜಾದೇವಿ ಅವರಿಗೂ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಸಿಕ್ಕಿರುವುದು ಸಂತಸದ ವಿಚಾರ.
ಅವರು ನಟಿಸಿರುವ ಸಾಕಷ್ಟು ಚಿತ್ರಗಳು ಅವರ ಅಭಿನಯವನ್ನು ಇಂದಿಗೂ ನೆನಪಿಗೆ ತರುತ್ತವೆ. ಅತ್ಯಂತ ಯೋಗ್ಯ ವ್ಯಕ್ತಿಗಳಿಗೆ ಸಿಕ್ಕ ಕರ್ನಾಟಕ ರತ್ನ ಪ್ರಶಸ್ತಿ ತನ್ನ ಮೌಲ್ಯವನ್ನು ಹೆಚ್ಚಿಸಿಕೊಂಡಿದೆ.
-ಶಿವಮೊಗ್ಗ ನಾ. ದಿನೇಶ್ ಅಡಿಗ,ಮೈಸೂರು
ಟೆಹ್ರಾನ್ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು…
ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ…
ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್ವೆಲ್ಗಳನ್ನು…
ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…
ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…
ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…