Andolana originals

ಓದುಗರ ಪತ್ರ: ‘ಕರ್ನಾಟಕ ರತ್ನ’ಕ್ಕೆ ಹೆಚ್ಚಿದ ಮೌಲ್ಯ

ಕನ್ನಡ ಚಿತ್ರರಂಗ ಕಂಡ ಅತ್ಯಂತ ಪ್ರತಿಭಾವಂತ ನಟರಾದ ಡಾ.ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ಮರ ಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು.ಡಾ. ವಿಷ್ಣುವರ್ಧನ್ ನಟಿಸಿದ್ದ ಎಷ್ಟೋ ಚಲನಚಿತ್ರ ಗಳು ಇಂದಿಗೂ ಕನ್ನಡ ಚಿತ್ರರಂಗದಲ್ಲಿ ಮೈಲಿ ಗಲ್ಲಾಗಿ ಉಳಿದಿವೆ.

ವಿಷ್ಣುವರ್ಧನ್ ನಿಧನರಾಗಿ ಹದಿನಾರು ವರ್ಷಗಳ ನಂತರ ಅವರಿಗೆ ಮರ ಣೋತ್ತರವಾಗಿ ಪ್ರಶಸ್ತಿ ನೀಡಿದ್ದು ಸಿದ್ದರಾಮಯ್ಯ ಸರ್ಕಾರ ಮಾಡಿದ ಅಪರೂಪದ ಒಳ್ಳೆಯ ಕೆಲಸಗಳಲ್ಲಿ ಒಂದಾಗಿದೆ. ಕಡೆಗೂ ಭಾರತೀ ವಿಷ್ಣುವರ್ಧನ್, ಅನಿರುದ್ಧ ವಿಷ್ಣುವರ್ಧನ್, ವಿಷ್ಣುವರ್ಧನ್ ಕುಟುಂಬ ಹಾಗೂ ಅವರ ಲಕ್ಷಾಂತರ ಅಭಿಮಾನಿಗಳು, ಅಂತೆಯೇ ಕನ್ನಡ ಚಿತ್ರ ಅಭಿಮಾನಿಗಳಿಗೆ ಸಂತಸದ ಕ್ಷಣ ಇದಾಗಿದೆ. ಅಭಿಜಾತ ಕಲಾವಿದೆ ಬಿ. ಸರೋಜಾದೇವಿ ಅವರಿಗೂ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಸಿಕ್ಕಿರುವುದು ಸಂತಸದ ವಿಚಾರ.

ಅವರು ನಟಿಸಿರುವ ಸಾಕಷ್ಟು ಚಿತ್ರಗಳು ಅವರ ಅಭಿನಯವನ್ನು ಇಂದಿಗೂ ನೆನಪಿಗೆ ತರುತ್ತವೆ. ಅತ್ಯಂತ ಯೋಗ್ಯ ವ್ಯಕ್ತಿಗಳಿಗೆ ಸಿಕ್ಕ ಕರ್ನಾಟಕ ರತ್ನ ಪ್ರಶಸ್ತಿ ತನ್ನ ಮೌಲ್ಯವನ್ನು ಹೆಚ್ಚಿಸಿಕೊಂಡಿದೆ.

-ಶಿವಮೊಗ್ಗ ನಾ. ದಿನೇಶ್ ಅಡಿಗ,ಮೈಸೂರು

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

31 mins ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

1 hour ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

2 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

3 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

3 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

4 hours ago