ಓದುಗರ ಪತ್ರ
ಕನ್ನಡ ಚಿತ್ರರಂಗ ಕಂಡ ಅತ್ಯಂತ ಪ್ರತಿಭಾವಂತ ನಟರಾದ ಡಾ.ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ಮರ ಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು.ಡಾ. ವಿಷ್ಣುವರ್ಧನ್ ನಟಿಸಿದ್ದ ಎಷ್ಟೋ ಚಲನಚಿತ್ರ ಗಳು ಇಂದಿಗೂ ಕನ್ನಡ ಚಿತ್ರರಂಗದಲ್ಲಿ ಮೈಲಿ ಗಲ್ಲಾಗಿ ಉಳಿದಿವೆ.
ವಿಷ್ಣುವರ್ಧನ್ ನಿಧನರಾಗಿ ಹದಿನಾರು ವರ್ಷಗಳ ನಂತರ ಅವರಿಗೆ ಮರ ಣೋತ್ತರವಾಗಿ ಪ್ರಶಸ್ತಿ ನೀಡಿದ್ದು ಸಿದ್ದರಾಮಯ್ಯ ಸರ್ಕಾರ ಮಾಡಿದ ಅಪರೂಪದ ಒಳ್ಳೆಯ ಕೆಲಸಗಳಲ್ಲಿ ಒಂದಾಗಿದೆ. ಕಡೆಗೂ ಭಾರತೀ ವಿಷ್ಣುವರ್ಧನ್, ಅನಿರುದ್ಧ ವಿಷ್ಣುವರ್ಧನ್, ವಿಷ್ಣುವರ್ಧನ್ ಕುಟುಂಬ ಹಾಗೂ ಅವರ ಲಕ್ಷಾಂತರ ಅಭಿಮಾನಿಗಳು, ಅಂತೆಯೇ ಕನ್ನಡ ಚಿತ್ರ ಅಭಿಮಾನಿಗಳಿಗೆ ಸಂತಸದ ಕ್ಷಣ ಇದಾಗಿದೆ. ಅಭಿಜಾತ ಕಲಾವಿದೆ ಬಿ. ಸರೋಜಾದೇವಿ ಅವರಿಗೂ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಸಿಕ್ಕಿರುವುದು ಸಂತಸದ ವಿಚಾರ.
ಅವರು ನಟಿಸಿರುವ ಸಾಕಷ್ಟು ಚಿತ್ರಗಳು ಅವರ ಅಭಿನಯವನ್ನು ಇಂದಿಗೂ ನೆನಪಿಗೆ ತರುತ್ತವೆ. ಅತ್ಯಂತ ಯೋಗ್ಯ ವ್ಯಕ್ತಿಗಳಿಗೆ ಸಿಕ್ಕ ಕರ್ನಾಟಕ ರತ್ನ ಪ್ರಶಸ್ತಿ ತನ್ನ ಮೌಲ್ಯವನ್ನು ಹೆಚ್ಚಿಸಿಕೊಂಡಿದೆ.
-ಶಿವಮೊಗ್ಗ ನಾ. ದಿನೇಶ್ ಅಡಿಗ,ಮೈಸೂರು
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…