Mysore
26
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಓದುಗರ ಪತ್ರ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್ ವಿರುದ್ಧ ೯೬ ರನ್‌ಗಳ ಜಯ ಸಾಧಿಸಿದ್ದು, ಮೂರನೇ ಬಾರಿ ವಿಶ್ವಕಪ್ ಎತ್ತಿಹಿಡಿದಿದೆ.

ಸಂಜು ಸ್ಯಾಮ್‌ಸನ್ ೮೯ರನ್, ಇಶಾನ್ ಕಿಶನ್ ಹಾಗೂ ಅಭಿಷೇಕ್ ಶರ್ಮಾ ಅವರ ಅರ್ಧ ಶತಕದಿಂದ ಭಾರತ ೨೫೫ರನ್‌ಗಳನ್ನು ಗಳಿಸಲು ಸಾಧ್ಯವಾಯಿತು. ಜಸ್ಪ್ರೀತ್ ಬೂಮ್ರಾ ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ(೧೫ ರನ್ ಗೆ ೪ ವಿಕೆಟ್), ಅಕ್ಷರ್ ಪಟೇಲ್ ಅವರ ಚಾಣಾಕ್ಷ ಬೌಲಿಂಗ್ ಎದುರು ನ್ಯೂಜಿಲೆಂಡ್ ಆಟಗಾರರು ಮಂಕಾದರು. ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದ ಬಲವೂ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು. ತನ್ಮೂಲಕ ಮೂರನೇ ಬಾರಿ ವಿಶ್ವ ಚಾಂಪಿಯನ್‌ಶಿಪ್ ಗೆದ್ದ ತಂಡ ಎಂಬ ಹೆಗ್ಗಳಿಕೆಗೂ ಭಾರತ ತಂಡವು ಪಾತ್ರವಾಯಿತು.

 – ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು

Tags:
error: Content is protected !!