ಓದುಗರ ಪತ್ರ
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್ ವಿರುದ್ಧ ೯೬ ರನ್ಗಳ ಜಯ ಸಾಧಿಸಿದ್ದು, ಮೂರನೇ ಬಾರಿ ವಿಶ್ವಕಪ್ ಎತ್ತಿಹಿಡಿದಿದೆ.
ಸಂಜು ಸ್ಯಾಮ್ಸನ್ ೮೯ರನ್, ಇಶಾನ್ ಕಿಶನ್ ಹಾಗೂ ಅಭಿಷೇಕ್ ಶರ್ಮಾ ಅವರ ಅರ್ಧ ಶತಕದಿಂದ ಭಾರತ ೨೫೫ರನ್ಗಳನ್ನು ಗಳಿಸಲು ಸಾಧ್ಯವಾಯಿತು. ಜಸ್ಪ್ರೀತ್ ಬೂಮ್ರಾ ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ(೧೫ ರನ್ ಗೆ ೪ ವಿಕೆಟ್), ಅಕ್ಷರ್ ಪಟೇಲ್ ಅವರ ಚಾಣಾಕ್ಷ ಬೌಲಿಂಗ್ ಎದುರು ನ್ಯೂಜಿಲೆಂಡ್ ಆಟಗಾರರು ಮಂಕಾದರು. ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದ ಬಲವೂ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು. ತನ್ಮೂಲಕ ಮೂರನೇ ಬಾರಿ ವಿಶ್ವ ಚಾಂಪಿಯನ್ಶಿಪ್ ಗೆದ್ದ ತಂಡ ಎಂಬ ಹೆಗ್ಗಳಿಕೆಗೂ ಭಾರತ ತಂಡವು ಪಾತ್ರವಾಯಿತು.
– ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…