Andolana originals

ಓದುಗರ ಪತ್ರ: ಜನರಿಗೆ ಮಾರಕವಾದ ಮಾಹಿತಿ ಫಲಕಗಳು

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧ ಬಡಾವಣೆಗಳು ಹಾಗೂ ರಸ್ತೆಗಳ ಎಲ್ಲ ಕ್ರಾಸ್‌ಗಳಲ್ಲಿ ವಾರ್ಡ್ ಸಂಖ್ಯೆ, ಆ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರು ಹಾಗೂ ಪಾಲಿಕೆ ಸದಸ್ಯರ ಮಾಹಿತಿಯ ಜೊತೆಗೆ ಪ್ರಮುಖ ರಸ್ತೆಯ ಹೆಸರು ಮತ್ತು ಕ್ರಾಸ್‌ಗಳ ಬಗ್ಗೆ ಮಾಹಿತಿಯುಳ್ಳ ಫಲಕಗಳನ್ನು ಅಳವಡಿಸಲಾಗಿದೆ. ಇದು ನಾಗರಿಕರಿಗೆ ಆಯಾ ಪ್ರದೇಶಗಳ ಬಗ್ಗೆ ಮಾಹಿತಿ ಒದಗಿಸುವ ಉತ್ತಮ ಕೆಲಸವಾಗಿದೆ. ಆದರೆ ಈ ಮಾಹಿತಿ ಫಲಕಗಳು ಜನರಿಗೆ ಮಾರಕವಾಗಿ ಪರಿಣಮಿಸಿವೆ. ಈ ರೀತಿಯ ಮಾಹಿತಿ ಫಲಕಗಳನ್ನು ಅಳವಡಿಸಿರುವ ಸ್ಥಳಗಳಲ್ಲಿ ಸಂಚರಿಸುವ ಜನರ ತಲೆಗೆ ತಗುಲಿ ಪೆಟ್ಟಾಗಿರುವ ಸಾಕಷ್ಟು ಉದಾಹರಣೆಗಳು ವರದಿಯಾಗಿವೆ.

ಕೆಲವರಿಗೆ ತಲೆಗೆ ಪೆಟ್ಟಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ನಿದರ್ಶನಗಳು ಸಾಕಷ್ಟಿವೆ. ಇಂತಹ ಅಪಾಯದಿಂದ ಪಾರಾಗಲು ಆಯಾ ಕ್ರಾಸ್‌ಗಳ ನಿವಾಸಿಗಳು, ಅಂಗಡಿ ಮಾಲೀಕರು ಈ ಫಲಕಗಳ ಕೆಳಭಾಗಕ್ಕೆ ನೀರಿನ ಬಾಟಲಿ ಹಾಕಿ, ಮತ್ತೆ ಕೆಲವೆಡೆ ಬಟ್ಟೆಗಳನ್ನು ಸುತ್ತಿ ಅಥವಾ ಮೃದುವಾದ ವಸ್ತುಗಳಿಂದ ಮುಚ್ಚಿದ್ದಾರೆ. ಈ ನಾಮ ಫಲಕಗಳು ಸಾಕಷ್ಟು ಎತ್ತರವಾಗಿರದೇ ಕುಳ್ಳಾಗಿರುವುದು ಇಂತಹ ಅವಘಡಗಳು ಸಂಭವಿಸಲು ಪ್ರಮುಖ ಕಾರಣವಾಗಿದೆ. ಇದು ಅವೈಜ್ಞಾನಿಕ ಕ್ರಮವಾಗಿದೆ. ನಗರ ಪಾಲಿಕೆ ಮತ್ತಷ್ಟು ಅವಘಡಗಳು ಸಂಭವಿಸುವ ಮೊದಲು ಈಗ ಅಳವಡಿಸಿರುವ ಮಾಹಿತಿ ಫಲಕಗಳನ್ನು ಎತ್ತರಿಸುವುದರ ಜೊತೆಗೆ ಮುಂದೆ ನಗರದ ಬೇರೆ ಬೇರೆ ಬಡಾವಣೆಗಳಲ್ಲಿ ಅಳವಡಿಸಲು ಉದ್ದೇಶಿಸಿರುವ ಮಾಹಿತಿ ಫಲಕಗಳು ಸಾಕಷ್ಟು ಎತ್ತರವಾಗಿರುವಂತೆ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.

ಅನುಷಾ ಎಂ., ಜೆ.ಪಿ.ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಸಫಾರಿಗೆ ಮೊಬೈಲ್‌ ನಿಷೇಧ ; ಪ್ರವಾಸಿಗರ ಬೇಸರ

ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…

42 mins ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

1 hour ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

2 hours ago

ಓದುಗರ ಪತ್ರ | ಕೆ. ಜಿ. ಕೊಪ್ಪಲಿನಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ

ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…

2 hours ago

ಓದುಗರ ಪತ್ರ | ಸ್ವಯಂ ಘೋಷಿತ ವಿಶ್ವನಾಯಕನ ದ್ವಂದ್ವ ನೀತಿ

ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ…

2 hours ago

ಓದುಗರ ಪತ್ರ | ಸ್ಪೇನ್ ದೇಶದ ನಿಲುವು ಅನುಕರಣೀಯ

ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.…

2 hours ago