Andolana originals

ಓದುಗರ ಪತ್ರ: ಜನರಿಗೆ ಮಾರಕವಾದ ಮಾಹಿತಿ ಫಲಕಗಳು

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧ ಬಡಾವಣೆಗಳು ಹಾಗೂ ರಸ್ತೆಗಳ ಎಲ್ಲ ಕ್ರಾಸ್‌ಗಳಲ್ಲಿ ವಾರ್ಡ್ ಸಂಖ್ಯೆ, ಆ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರು ಹಾಗೂ ಪಾಲಿಕೆ ಸದಸ್ಯರ ಮಾಹಿತಿಯ ಜೊತೆಗೆ ಪ್ರಮುಖ ರಸ್ತೆಯ ಹೆಸರು ಮತ್ತು ಕ್ರಾಸ್‌ಗಳ ಬಗ್ಗೆ ಮಾಹಿತಿಯುಳ್ಳ ಫಲಕಗಳನ್ನು ಅಳವಡಿಸಲಾಗಿದೆ. ಇದು ನಾಗರಿಕರಿಗೆ ಆಯಾ ಪ್ರದೇಶಗಳ ಬಗ್ಗೆ ಮಾಹಿತಿ ಒದಗಿಸುವ ಉತ್ತಮ ಕೆಲಸವಾಗಿದೆ. ಆದರೆ ಈ ಮಾಹಿತಿ ಫಲಕಗಳು ಜನರಿಗೆ ಮಾರಕವಾಗಿ ಪರಿಣಮಿಸಿವೆ. ಈ ರೀತಿಯ ಮಾಹಿತಿ ಫಲಕಗಳನ್ನು ಅಳವಡಿಸಿರುವ ಸ್ಥಳಗಳಲ್ಲಿ ಸಂಚರಿಸುವ ಜನರ ತಲೆಗೆ ತಗುಲಿ ಪೆಟ್ಟಾಗಿರುವ ಸಾಕಷ್ಟು ಉದಾಹರಣೆಗಳು ವರದಿಯಾಗಿವೆ.

ಕೆಲವರಿಗೆ ತಲೆಗೆ ಪೆಟ್ಟಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ನಿದರ್ಶನಗಳು ಸಾಕಷ್ಟಿವೆ. ಇಂತಹ ಅಪಾಯದಿಂದ ಪಾರಾಗಲು ಆಯಾ ಕ್ರಾಸ್‌ಗಳ ನಿವಾಸಿಗಳು, ಅಂಗಡಿ ಮಾಲೀಕರು ಈ ಫಲಕಗಳ ಕೆಳಭಾಗಕ್ಕೆ ನೀರಿನ ಬಾಟಲಿ ಹಾಕಿ, ಮತ್ತೆ ಕೆಲವೆಡೆ ಬಟ್ಟೆಗಳನ್ನು ಸುತ್ತಿ ಅಥವಾ ಮೃದುವಾದ ವಸ್ತುಗಳಿಂದ ಮುಚ್ಚಿದ್ದಾರೆ. ಈ ನಾಮ ಫಲಕಗಳು ಸಾಕಷ್ಟು ಎತ್ತರವಾಗಿರದೇ ಕುಳ್ಳಾಗಿರುವುದು ಇಂತಹ ಅವಘಡಗಳು ಸಂಭವಿಸಲು ಪ್ರಮುಖ ಕಾರಣವಾಗಿದೆ. ಇದು ಅವೈಜ್ಞಾನಿಕ ಕ್ರಮವಾಗಿದೆ. ನಗರ ಪಾಲಿಕೆ ಮತ್ತಷ್ಟು ಅವಘಡಗಳು ಸಂಭವಿಸುವ ಮೊದಲು ಈಗ ಅಳವಡಿಸಿರುವ ಮಾಹಿತಿ ಫಲಕಗಳನ್ನು ಎತ್ತರಿಸುವುದರ ಜೊತೆಗೆ ಮುಂದೆ ನಗರದ ಬೇರೆ ಬೇರೆ ಬಡಾವಣೆಗಳಲ್ಲಿ ಅಳವಡಿಸಲು ಉದ್ದೇಶಿಸಿರುವ ಮಾಹಿತಿ ಫಲಕಗಳು ಸಾಕಷ್ಟು ಎತ್ತರವಾಗಿರುವಂತೆ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.

ಅನುಷಾ ಎಂ., ಜೆ.ಪಿ.ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

4 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

5 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

5 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

5 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

5 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

5 hours ago