Andolana originals

ಓದುಗರ ಪತ್ರ: ಬಸ್‌ನಲ್ಲಿ ಮಾರ್ಗಸೂಚಿ ಫಲಕ ಅಳವಡಿಸಿ

ಇತ್ತೀಚೆಗೆ ಸರ್ಕಾರಿ ಬಸ್‌ಗಳು ಪ್ರಚಾರದ ವೇದಿಕೆಗಳಾಗಿದ್ದು, ವಿವಿಧ ಕಂಪೆನಿಗಳು ತಮ್ಮ ಉತ್ಪನ್ನಗಳ ಬಗ್ಗೆ ಬಸ್‌ಗಳ ಮೇಲೆ ಪೋಸ್ಟರ್‌ಗಳನ್ನು ಅಂಟಿಸಿ ಪ್ರಚಾರ ಮಾಡುತ್ತಿವೆ.

ವಿಮಲ್ ಪಾನ್ ಮಸಾಲ, ಆಶೀರ್ವಾದ ಪೈಪ್ಸ್, ವಿವಿಧ ಕಂಪೆನಿಗಳ ವಾಹನಗಳು ಹೀಗೆ ಅನೇಕ ಉತ್ಪನ್ನಗಳ ಜಾಹೀರಾತು, ಸಿನಿಮಾ ಪ್ರಚಾರದ ಪೋಸ್ಟರ್‌ಗಳು ಎಲ್ಲ ಸರ್ಕಾರಿ ಬಸ್‌ಗಳಲ್ಲಿಯೂ ರಾರಾಜಿಸುತ್ತಿವೆ. ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಇಂತಹ ಪೋಸ್ಟರ್‌ಗಳನ್ನು ಅಳವಡಿಸುವುದ ಎಷ್ಟರ ಮಟ್ಟಿಗೆ ಸರಿ? ಇತ್ತೀಚೆಗೆ ಮೈಸೂರು-ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಿಳೆಯೊಬ್ಬರು ಬಸ್ ಕಿಟಕಿಯಿಂದ ತಲೆ ಆಚೆ ಹಾಕಿದ ಪರಿಣಾಮ ಎದುರು ಬಂದ ವಾಹನ ಅವರ ತಲೆಗೆ ಡಿಕ್ಕಿ ಹೊಡೆದಿದ್ದು, ಆಕೆ ಸಾವನ್ನಪ್ಪಿದ್ದಾರೆ. ಆದ್ದರಿಂದ ಸರ್ಕಾರಿ ಬಸ್‌ಗಳಲ್ಲಿ ಜಾಹೀರಾತುಗಳ ಬದಲು ಸಾರ್ವಜನಿಕರು ಬಸ್‌ಗಳಲ್ಲಿ ಪ್ರಯಾಣ ಮಾಡುವಾಗ ಹೇಗೆ  ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು, ಸಹಪ್ರಯಾಣಿಕರೊಂದಿಗೆ ಹೇಗೆ ವರ್ತಿಸಬೇಕು ಮುಂತಾದ ಸೂಚನೆಗಳನ್ನು ಅಳವಡಿಸಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಆದ್ದರಿಂದ ಸಾರಿಗೆ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಜಾಹೀರಾತಿನ ಬದಲು ಮಾರ್ಗಸೂಚಿ ಫಲಕಗಳನ್ನು ಅಳವಡಿಸುವ ಬಗ್ಗೆ ಚಿಂತಿಸಲಿ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

4 mins ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

17 mins ago

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

2 hours ago

ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎನ್‌ಟಿಎ

ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಅಂಗಳಕ್ಕೆ ತಲುಪಿದ ಅಧಿಕಾರ ಹಂಚಿಕೆ ಮಾತು

ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…

2 hours ago

ಪಾರಂಪರಿಕ ಕಟ್ಟಡ ಸಂರಕ್ಷಿಸಿ.. ಪರಂಪರೆ ಉಳಿಸಿ..!

ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…

3 hours ago