ಇತ್ತೀಚೆಗೆ ಸರ್ಕಾರಿ ಬಸ್ಗಳು ಪ್ರಚಾರದ ವೇದಿಕೆಗಳಾಗಿದ್ದು, ವಿವಿಧ ಕಂಪೆನಿಗಳು ತಮ್ಮ ಉತ್ಪನ್ನಗಳ ಬಗ್ಗೆ ಬಸ್ಗಳ ಮೇಲೆ ಪೋಸ್ಟರ್ಗಳನ್ನು ಅಂಟಿಸಿ ಪ್ರಚಾರ ಮಾಡುತ್ತಿವೆ.
ವಿಮಲ್ ಪಾನ್ ಮಸಾಲ, ಆಶೀರ್ವಾದ ಪೈಪ್ಸ್, ವಿವಿಧ ಕಂಪೆನಿಗಳ ವಾಹನಗಳು ಹೀಗೆ ಅನೇಕ ಉತ್ಪನ್ನಗಳ ಜಾಹೀರಾತು, ಸಿನಿಮಾ ಪ್ರಚಾರದ ಪೋಸ್ಟರ್ಗಳು ಎಲ್ಲ ಸರ್ಕಾರಿ ಬಸ್ಗಳಲ್ಲಿಯೂ ರಾರಾಜಿಸುತ್ತಿವೆ. ಕೆಎಸ್ಆರ್ಟಿಸಿ ಬಸ್ಗಳಲ್ಲಿ ಇಂತಹ ಪೋಸ್ಟರ್ಗಳನ್ನು ಅಳವಡಿಸುವುದ ಎಷ್ಟರ ಮಟ್ಟಿಗೆ ಸರಿ? ಇತ್ತೀಚೆಗೆ ಮೈಸೂರು-ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಿಳೆಯೊಬ್ಬರು ಬಸ್ ಕಿಟಕಿಯಿಂದ ತಲೆ ಆಚೆ ಹಾಕಿದ ಪರಿಣಾಮ ಎದುರು ಬಂದ ವಾಹನ ಅವರ ತಲೆಗೆ ಡಿಕ್ಕಿ ಹೊಡೆದಿದ್ದು, ಆಕೆ ಸಾವನ್ನಪ್ಪಿದ್ದಾರೆ. ಆದ್ದರಿಂದ ಸರ್ಕಾರಿ ಬಸ್ಗಳಲ್ಲಿ ಜಾಹೀರಾತುಗಳ ಬದಲು ಸಾರ್ವಜನಿಕರು ಬಸ್ಗಳಲ್ಲಿ ಪ್ರಯಾಣ ಮಾಡುವಾಗ ಹೇಗೆ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು, ಸಹಪ್ರಯಾಣಿಕರೊಂದಿಗೆ ಹೇಗೆ ವರ್ತಿಸಬೇಕು ಮುಂತಾದ ಸೂಚನೆಗಳನ್ನು ಅಳವಡಿಸಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಆದ್ದರಿಂದ ಸಾರಿಗೆ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಜಾಹೀರಾತಿನ ಬದಲು ಮಾರ್ಗಸೂಚಿ ಫಲಕಗಳನ್ನು ಅಳವಡಿಸುವ ಬಗ್ಗೆ ಚಿಂತಿಸಲಿ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…