ಓದುಗರ ಪತ್ರ
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ರಾಜ್ಯಾದ್ಯಂತ ಪ್ರತಿನಿತ್ಯ ಲಕ್ಷಾಂತರ ಜನರು ಪ್ರಯಾಣಿಸುತ್ತಾರೆ. ಬಸ್ನಲ್ಲಿ ಪ್ರಯಾಣಿಕರು ಕಡಲೆಕಾಯಿ ಸಿಪ್ಪೆ, ಚಾಕೋಲೇಟ್, ಬಿಸ್ಕೆಟ್ ಇನ್ನಿತರ ತಿಂಡಿ ತಿನಿಸುಗಳನ್ನು ತಿಂದು ಪ್ಲಾಸ್ಟಿಕ್ ಕವರ್ಗಳನ್ನು, ಬಸ್ಸಿನಲ್ಲಿ ಬಿಟ್ಟು ಹೋಗುತ್ತಾರೆ. ನೀರಿನ ಬಾಟಲಿಯನ್ನು ಬಿಸಾಡಿರುತ್ತಾರೆ. ಇನ್ನೂ ಕೆಲವರು ಕಿಟಕಿಯ ಮೂಲಕ ಕಸವನ್ನು ಎಸೆಯುತ್ತಾರೆ.
ಬೇರೆ ಪ್ರಯಾಣಿಕರು ಬಸ್ ಹತ್ತಿದಾಗ ಬಸ್ನಲ್ಲಿ ಕಸ ಬಿದ್ದಿರುವುದು ಕಂಡರೆ ಬೇಸರವಾಗುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ಕಸದ ಬುಟ್ಟಿಯನ್ನು ಅಳವಡಿಸಿ, ಪ್ರಯಾಣಿಕರು ಕಡ್ಡಾಯವಾಗಿ ಕಸವನ್ನು ಕಸದ ಬುಟ್ಟಿಯಲ್ಲಿ ಹಾಕುವಂತೆ ಅರಿವು ಮೂಡಿಸಬೇಕು. ನಿಯಮ ಉಲ್ಲಂಸಿದವರಿಗೆ ದಂಡ ವಿಧಿಸಬೇಕು. ಹೀಗಾದಾಗ ಮಾತ್ರ ಸಾರಿಗೆ ನಿಗಮದ ಬಸ್ಗಳಲ್ಲಿ ಸ್ವಚ್ಛತೆ ಕಾಪಾಡಲು ಸಾಧ್ಯ. ಈ ನಿಟ್ಟಿನಲ್ಲಿ ಸಾರಿಗೆ ನಿಗಮದ ಅಧಿಕಾರಿಗಳು ಕ್ರಮ ಕೈಗೊಳ್ಳುವುದು ಅಗತ್ಯ.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…