ಓದುಗರ ಪತ್ರ
ಬೆಂಗಳೂರಿನ ಯಶವಂತಪುರ, ಎಸ್ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ, ಮಂಗಳೂರು, ಬಳ್ಳಾರಿ, ಬೀದರ್, ಬೆಳಗಾವಿ, ಧಾರವಾಡ ಇನ್ನಿತರ ಭಾಗಗಳಿಗೆ ತೆರಳುವ ರೈಲುಗಾಡಿಗಳಲ್ಲಿ ದಿನ ನಿತ್ಯ ಪ್ರಯಾಣಿಕರ ಸಂಖ್ಯೆ ಏರಿಕೆಯಾಗುತ್ತಿದೆ.
ಶನಿವಾರ ಮತ್ತು ಭಾನುವಾರ ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುತ್ತದೆ. ಜನರಲ್ ಬೋಗಿಗಳಲ್ಲಿ ನೂಕು ನುಗ್ಗಲಿನಲ್ಲಿ, ಮಹಿಳೆಯರು ಸೇರಿದಂತೆ ಗರ್ಭಿಣಿಯರೂ ಕೂಡ ಸೀಟು ಸಿಗದೆ ಪರದಾಡುವಂತಾಗುತ್ತದೆ. ಬಸ್ಸಿನಲ್ಲಿ ಪ್ರಯಾಣಿಸಲು ಸಾಧ್ಯವಾಗದ ಹಿರಿಯ ನಾಗರಿಕರು ರೈಲಿನಲ್ಲಿ ಪ್ರಯಾಣ ಮಾಡುವುದಕ್ಕೆ ಬಂದರೆ, ಜನರಲ್ ಬೋಗಿಗಳಲ್ಲಿ ಸೀಟು ಸಿಗದೇ ತೊಂದರೆ ಅನುಭವಿಸುತ್ತಿದ್ದಾರೆ.
ಜನರಲ್ ಬೋಗಿಯಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾದಾಗ ದ್ವಿತೀಯ ದರ್ಜೆ ಪ್ರಯಾಣದ ಟಿಕೆಟ್ ಪಡೆದವರು ಸ್ಲೀಪರ್ ಬೋಗಿಯಲ್ಲಿ ಪ್ರಯಾಣ ಮಾಡಲು ಮುಂದಾಗಿ ಟಿಕೆಟ್ ಕಲೆಕ್ಟರ್ಗಳಿಗೆ ಸಿಕ್ಕಿ ಬಿದ್ದು ದಂಡ ಕಟುವಂತಾಗಿದೆ. ರೈಲ್ವೆ ಖಾತೆ ರಾಜ್ಯ ಸಚಿವರಾಗಿರುವ ವಿ. ಸೋಮಣ್ಣ ಅವರು ಕೂಡಲೇ ಯಶವಂತಪುರ, ಎಸ್ಎಂವಿಟಿ, ಕೆ.ಆರ್ .ಪುರಂ, ರೈಲ್ವೆ ನಿಲ್ದಾಣಗಳಿಂದ ಸಂಚರಿಸುವ ರೈಲುಗಳಿಗೆ ಹೆಚ್ಚುವರಿಯಾಗಿ ಜನರಲ್ ಬೋಗಿಗಳನ್ನು ಅಳವಡಿಸಬೇಕು, ರೈಲುಗಳ ಜನರಲ್ ಬೋಗಿಗಳಲ್ಲಿ ಹಿರಿಯ ನಾಗರಿಕರಿಗೆ ಸೀಟು ಕಾಯ್ದಿರಿಸಬೇಕು ಹಾಗೂ ವಾರಾಂತ್ಯದಲ್ಲಿ ಮತ್ತು ರಜಾದಿನಗಳಲ್ಲಿ ಹೆಚ್ಚುವರಿಯಾಗಿ ರೈಲು ಸಂಚಾರ ವ್ಯವಸ್ಥೆ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…