ಇತ್ತೀಚಿನ ದಿನಗಳಲ್ಲಿ ಮೈಸೂರಿನಲ್ಲಿ ಹಣ,ಒಡವೆ ಕಳ್ಳತನ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ. ಅಷ್ಟೇ ಅಲ್ಲದೆ ರಸ್ತೆಯಲ್ಲಿ ನಿಲ್ಲಿಸಿರುವ ದ್ವಿಚಕ್ರ ವಾಹನಗಳು ಹಾಗೂ ಇತರ ವಾಹನಗಳನ್ನು ಕಳ್ಳತನ ಮಾಡಲಾಗುತ್ತಿದೆ.
ರಸ್ತೆಗಳಲ್ಲಿ ಕೆಲ ಯುವಕರು ಗಲಾಟೆ ಮಾಡುತ್ತಾ ಕಿರುಚಾಡುತ್ತಾ ತೊಂದರೆ ಕೊಡುವುದು ಮಾಮೂಲಿ ಎಂಬಂತಾಗಿದೆ. ರಾತ್ರಿಯ ವೇಳೆಯಲ್ಲಿ ದುಬಾರಿ ಬೈಕ್ಗಳಲ್ಲಿ ಅತೀ ವೇಗವಾಗಿ ಚಾಲನೆ ಮಾಡುವ ಮೂಲಕ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದಿದ್ದಾರೆ.
ಉದ್ಯಾನವನಗಳಲ್ಲಿ ಕುಳಿತು ಧೂಮಪಾನ, ಮದ್ಯಪಾನ ಮಾಡಿ ವಾತಾವರಣವನ್ನು ಹದಗೆಡಿಸಲಾಗುತ್ತಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರೀತಿ ಪ್ರೇಮದ ನೆಪದಲ್ಲಿ ಉದ್ಯಾನವನಗಳಲ್ಲಿಯೇ ಮೋಜು ಮಸ್ತಿ ಮಾಡುತ್ತಿದ್ದಾರೆ.
ಇದರಿಂದ ವಾಯುವಿಹಾರಕ್ಕೆ ಬರುವವರಿಗೆ ಮುಜುಗರವಾಗುತ್ತಿದೆ. ಇಂತಹ ಕೃತ್ಯಗಳನ್ನು ತಡೆಯಲು ರಸ್ತೆಗಳ ಬದಿ ಹಾಗೂ ಉದ್ಯಾನವನಗಳಲ್ಲಿ ಸಿ ಸಿ ಕ್ಯಾಮೆರಾಗಳನ್ನು ಅಳವಡಿಸಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಿದೆ.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…