ಇತ್ತೀಚಿನ ದಿನಗಳಲ್ಲಿ ಮೈಸೂರಿನಲ್ಲಿ ಹಣ,ಒಡವೆ ಕಳ್ಳತನ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ. ಅಷ್ಟೇ ಅಲ್ಲದೆ ರಸ್ತೆಯಲ್ಲಿ ನಿಲ್ಲಿಸಿರುವ ದ್ವಿಚಕ್ರ ವಾಹನಗಳು ಹಾಗೂ ಇತರ ವಾಹನಗಳನ್ನು ಕಳ್ಳತನ ಮಾಡಲಾಗುತ್ತಿದೆ.
ರಸ್ತೆಗಳಲ್ಲಿ ಕೆಲ ಯುವಕರು ಗಲಾಟೆ ಮಾಡುತ್ತಾ ಕಿರುಚಾಡುತ್ತಾ ತೊಂದರೆ ಕೊಡುವುದು ಮಾಮೂಲಿ ಎಂಬಂತಾಗಿದೆ. ರಾತ್ರಿಯ ವೇಳೆಯಲ್ಲಿ ದುಬಾರಿ ಬೈಕ್ಗಳಲ್ಲಿ ಅತೀ ವೇಗವಾಗಿ ಚಾಲನೆ ಮಾಡುವ ಮೂಲಕ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದಿದ್ದಾರೆ.
ಉದ್ಯಾನವನಗಳಲ್ಲಿ ಕುಳಿತು ಧೂಮಪಾನ, ಮದ್ಯಪಾನ ಮಾಡಿ ವಾತಾವರಣವನ್ನು ಹದಗೆಡಿಸಲಾಗುತ್ತಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರೀತಿ ಪ್ರೇಮದ ನೆಪದಲ್ಲಿ ಉದ್ಯಾನವನಗಳಲ್ಲಿಯೇ ಮೋಜು ಮಸ್ತಿ ಮಾಡುತ್ತಿದ್ದಾರೆ.
ಇದರಿಂದ ವಾಯುವಿಹಾರಕ್ಕೆ ಬರುವವರಿಗೆ ಮುಜುಗರವಾಗುತ್ತಿದೆ. ಇಂತಹ ಕೃತ್ಯಗಳನ್ನು ತಡೆಯಲು ರಸ್ತೆಗಳ ಬದಿ ಹಾಗೂ ಉದ್ಯಾನವನಗಳಲ್ಲಿ ಸಿ ಸಿ ಕ್ಯಾಮೆರಾಗಳನ್ನು ಅಳವಡಿಸಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಿದೆ.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…