Andolana originals

ಚಾ.ಬೆಟ್ಟದ ಮೆಟ್ಟಿಲುಗಳಿಗೆ ವಿದ್ಯುತ್ ದೀಪ ಅಳವಡಿಸಿ

ಆಷಾಢ ಮಾಸದ ಶುಕ್ರವಾರಗಳಂದು ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆನಡೆಯುವುದರಿಂದಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಾರೆ.

ನೂರಾರು ಭಕ್ತರು ಬೆಳಗಿನ ಜಾವವೇ ಮೆಟ್ಟಿಲುಗಳ ಮೂಲಕ ಬೆಟ್ಟ ಚಾಮುಂಡೇಶ್ವರಿಯ ದರ್ಶನಕ್ಕೆ ಬರುತ್ತಾರೆ. ಆದರೆ, ಈ ಮಾರ್ಗದಲ್ಲಿ ವಿದ್ಯುತ್‌ ದೀಪಗಳಿಲ್ಲದೆ ಮುಂಜಾನೆಯ ನಸುಕಿನಲ್ಲಿ ಭಕ್ತರು ಪರದಾಡುವಂತಾಗಿದೆ. ಈ ಮಾರ್ಗದಲ್ಲಿ ವಿದ್ಯುತ್ ಕಂಬಗಳಿದ್ದರೂ ಬಲ್ಬ್‌ಗಳಿಲ್ಲದೆ ಬೆಳಕಿನ ವ್ಯವಸ್ಥೆ ಇಲ್ಲದಂತಾಗಿದೆ.

ಇದರಿಂದಾಗಿ ಕತ್ತಲಿನಲ್ಲಿ ಬೆಟ್ಟವನ್ನು ಏರಿ ಬರುವವರಿಗೆ ಕಾಡುಪ್ರಾಣಿಗಳ ಹಾವಳಿಯ ಜತೆಗೆ ಸರಗಳ್ಳರ ಭಯವೂ ಕಾಡುತ್ತಿರುತ್ತದೆ. ಆದ್ದರಿಂದ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿಯವರು ಈ ಮೆಟ್ಟಿಲುಗಳಿಗೆ ವಿದ್ಯುತ್ ದೀಪಗಳ ವ್ಯವಸ್ಥೆ ಮಾಡಿಸಬೇಕಿದೆ. ಅಲ್ಲದೆ ಪೊಲೀಸ್ ಇಲಾಖೆಯೂ ಅಲ್ಲಲ್ಲಿ ಸಿಬ್ಬಂದಿಯನ್ನು ನಿಯೋಜಿಸಿ ಭಕ್ತರಿಗೆ ರಕ್ಷಣೆ ನೀಡಬೇಕಿದೆ.

-ಬ್ಯಾಂಕ್ ಶಿವಕುಮಾರ್, ಜೆ.ಪಿ.ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

4 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

5 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

5 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

14 hours ago