Andolana originals

ಓದುಗರ ಪತ್ರ: ಹಂಪ್‌ಗಳನ್ನು ಅಳವಡಿಸಿ

ಮೈಸೂರಿನ ಶ್ರೀರಾಂಪುರ ವಾಟರ್ ಟ್ಯಾಂಕ್ ಸರ್ಕಲ್‌ಗೆ ನಾಲ್ಕು ದಿಕ್ಕಿನಿಂದಲೂ ರಸ್ತೆಗಳು ಕೂಡುತ್ತಿವೆ. ಯಾವ ರಸ್ತೆಗೂ ಹಂಪ್‌ಗಳನ್ನು ಅಳವಡಿಸದ ಪರಿಣಾಮ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ.

ನಗರದ ಭ್ರಮಾರಾಂಬ ಕಲ್ಯಾಣ ಮಂಟಪದ ಸಮೀಪವಿರುವ ಈ ಸರ್ಕಲ್ ವಿವೇಕಾನಂದ ಸರ್ಕಲ್, ಬೆಮೆಲ್ ಲೇಔಟ್, ಎಲ್‌ಐಸಿ ಕಾಲೋನಿ ಮತ್ತು ಲಿಂಗಾಂಬುಽ ಪಾಳ್ಯಕ್ಕೆ ಸಂಪರ್ಕ ಕಲ್ಪಿಸುತ್ತದೆ. ಅಲ್ಲದೆ ಪರಸಯ್ಯನ ಹುಂಡಿಗೂ ಇದೇ ಸರ್ಕಲ್ ಮೂಲಕ ಹಾದು ಹೋಗಬೇಕು.

ವಾಹನ ದಟ್ಟಣೆ ಹೆಚ್ಚಾಗಿರುವ ಈ ರಸ್ತೆಗಳಿಗೆ ಹಂಪ್ ಗಳಿಲ್ಲದಿರುವ ಪರಿಣಾಮ ವಾಹನ ಸವಾರರು ವೇಗವಾಗಿ ಸಂಚರಿಸುತ್ತಿದ್ದು, ನಿತ್ಯ ಒಂದಲ್ಲ ಒಂದು ಅಪಘಾತ ಸಂಭವಿಸುತ್ತಿವೆ. ಈ ರಸ್ತೆಗಳಿಗೆ ಹಂಪ್‌ಗಳನ್ನು ಅಳವಡಿಸುವಂತೆ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಮಹಾನಗರ ಪಾಲಿಕೆಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಈ ವೃತ್ತಕ್ಕೆ ಸಂಪರ್ಕಗೊಂಡಿರುವ ರಸ್ತೆಗಳಿಗೆ ಹಂಪ್‌ಗಳನ್ನು ಅಳವಡಿಸಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

 

andolana

Recent Posts

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

1 min ago

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…

11 mins ago

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…

14 mins ago

ಓದುಗರ ಪತ್ರ | ಕಸ ವಿಂಗಡಣೆ ಕ್ರಮ ಸ್ವಾಗತಾರ್ಹ

ಮೈಸೂರಿನ ಎಲ್ಲ ವಾರ್ಡ್‌ಗಳಲ್ಲೂ ಮಹಾನಗರ ಪಾಲಿಕೆಯಿಂದ ಕಸ ವಿಂಗಡಣೆಯನ್ನು ಮೂಲದಿಂದಲೇ ಅಂದರೆ ಮನೆಮನೆಗಳಲ್ಲೇ ಹಸಿ ಕಸ ಮತ್ತು ಒಣ ಕಸ…

18 mins ago

ಓದುಗರ ಪತ್ರ | ದ್ವೇಷ ಭಾಷಣ ಮಸೂದೆ: ಸ್ವಾಗತಾರ್ಹ

ರಾಜ್ಯಸರ್ಕಾರವು ವಿಧಾನಸಭೆಯಲ್ಲಿ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆಗಟ್ಟುವಿಕೆ) ಮಸೂದೆ ೨೦೨೫’ ಅನ್ನು ಮಂಡಿಸಿದೆ. ಈ ಮಸೂದೆ…

20 mins ago

ಮೈ ಕೊರೆಯುವ ಚಳಿ ನಲುಗಿದ ಮೈಸೂರು

ಧನರ್ಮಾಸಕ್ಕೆ ಮೊದಲೇ ಚಳಿ ದಾಂಗುಡಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್‌ ದಾಖಲು ಕೆ.ಬಿ.ರಮೇಶನಾಯಕ ಮೈಸೂರು : ಜಿಲ್ಲೆಯಲ್ಲಿ ಕಳೆದ…

27 mins ago