ಎಚ್. ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಗದ್ದಿಗೆ-ಮಾದಾಪುರ ಸರ್ಕಲ್ನಲ್ಲಿ ಸರಿಯಾದ ಮಾರ್ಗಸೂಚಿ ಹಾಗೂ ನಾಮಫಲಕಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಮಾದಾಪುರದ ಈ ವೃತ್ತ ಎಚ್. ಡಿ. ಕೋಟೆ, ಮೈಸೂರು ಹಾಗೂ ಗದ್ದಿಗೆಗೆ ಸಂಪರ್ಕ ಕಲ್ಪಿಸುವ ವೃತ್ತವಾಗಿದ್ದು, ಜನರು ಎಚ್. ಡಿ. ಕೋಟೆಯಿಂದ ಮೈಸೂರು, ಹುಣಸೂರು, ಗದ್ದಿಗೆ ಹಾಗೂ ಹಾಸನಕ್ಕೂ ಇದೇ ಮಾರ್ಗವಾಗಿ ಸಂಚರಿಸುತ್ತಾರೆ. ಇಂತಹ ವೃತ್ತದಲ್ಲಿ ಯಾವುದೇ ನಾಮಫಲಕಗಳಾಗಲಿ, ಸೂಚನಾಫಲಕಗಳಾಗಲಿ ಇಲ್ಲದಿರುವುದು ಪ್ರಯಾಣಿಕರಿಗೆ ಗೊಂದಲವನ್ನುಂಟು ಮಾಡುತ್ತಿದೆ. ಅಲ್ಲದೆ ಈ ವೃತ್ತ ಮೈಸೂರು-ಮಾನಂದವಾಡಿ ಮುಖ್ಯರಸ್ತೆಗೆ ಸಂಪರ್ಕ ಹೊಂದಿದ್ದು, ಸೂಚನಾಫಲಕಗಳಿಲ್ಲದಿರುವುದರಿಂದ ಇಲ್ಲಿ ಆಗಾಗ್ಗೆ ಅಪಘಾತಗಳಾಗುತ್ತಿವೆ. ಇನ್ನು ಈ ವೃತ್ತಕ್ಕೆ ಸರಿಯಾದ ವಿದ್ಯುತ್ ದೀಪಗಳನ್ನು ಅಳವಡಿಸದಿರುವುದರಿಂದ ರಾತ್ರಿಯ ವೇಳೆ ಈ ವೃತ್ತದ ಬಳಿ ಸಂಚರಿಸಲು ಕಷ್ಟವಾಗುತ್ತಿದೆ. ಅಲ್ಲದೆ ಈ ವೃತ್ತದ ಸಮೀಪದಲ್ಲಿಯೇ ಮದ್ಯದಂಗಡಿಯೂ ಇದ್ದು, ಕುಡಿದು ವಾಹನ ಚಲಾಯಿಸುವವರು ಏಕಾಏಕಿ ಮುಖ್ಯ ರಸ್ತೆಗೆ ಬರುತ್ತಿದ್ದಾರೆ. ಇದರಿಂದಾಗಿ ಅಪಘಾತಗಳಾಗುತ್ತಿವೆ. ಆದ್ದರಿಂದ ಸಂಬಂಧಪಟ್ಟವರು ಈ ಸರ್ಕಲ್ಗೆ ವಿದ್ಯುತ್ ದೀಪಗಳನ್ನು ಅಳವಡಿಸುವ ಜತೆಗೆ ಸೂಚನಾಫಲಕಗಳನ್ನೂ ಅಳವಡಿಸಬೇಕಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…