Andolana originals

ಓದುಗರ ಪತ್ರ: ವೃತ್ತದಲ್ಲಿ ವಿದ್ಯುತ್ ದೀಪ, ನಾಮಫಲಕ ಅಳವಡಿಸಿ

ಎಚ್. ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಗದ್ದಿಗೆ-ಮಾದಾಪುರ ಸರ್ಕಲ್‌ನಲ್ಲಿ ಸರಿಯಾದ ಮಾರ್ಗಸೂಚಿ ಹಾಗೂ ನಾಮಫಲಕಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಮಾದಾಪುರದ ಈ ವೃತ್ತ ಎಚ್. ಡಿ. ಕೋಟೆ, ಮೈಸೂರು ಹಾಗೂ ಗದ್ದಿಗೆಗೆ ಸಂಪರ್ಕ ಕಲ್ಪಿಸುವ ವೃತ್ತವಾಗಿದ್ದು, ಜನರು ಎಚ್. ಡಿ. ಕೋಟೆಯಿಂದ ಮೈಸೂರು, ಹುಣಸೂರು, ಗದ್ದಿಗೆ ಹಾಗೂ ಹಾಸನಕ್ಕೂ ಇದೇ ಮಾರ್ಗವಾಗಿ ಸಂಚರಿಸುತ್ತಾರೆ. ಇಂತಹ ವೃತ್ತದಲ್ಲಿ ಯಾವುದೇ ನಾಮಫಲಕಗಳಾಗಲಿ, ಸೂಚನಾಫಲಕಗಳಾಗಲಿ ಇಲ್ಲದಿರುವುದು ಪ್ರಯಾಣಿಕರಿಗೆ ಗೊಂದಲವನ್ನುಂಟು ಮಾಡುತ್ತಿದೆ. ಅಲ್ಲದೆ ಈ ವೃತ್ತ ಮೈಸೂರು-ಮಾನಂದವಾಡಿ ಮುಖ್ಯರಸ್ತೆಗೆ ಸಂಪರ್ಕ ಹೊಂದಿದ್ದು, ಸೂಚನಾಫಲಕಗಳಿಲ್ಲದಿರುವುದರಿಂದ ಇಲ್ಲಿ ಆಗಾಗ್ಗೆ ಅಪಘಾತಗಳಾಗುತ್ತಿವೆ. ಇನ್ನು ಈ ವೃತ್ತಕ್ಕೆ ಸರಿಯಾದ ವಿದ್ಯುತ್ ದೀಪಗಳನ್ನು ಅಳವಡಿಸದಿರುವುದರಿಂದ ರಾತ್ರಿಯ ವೇಳೆ ಈ ವೃತ್ತದ ಬಳಿ ಸಂಚರಿಸಲು ಕಷ್ಟವಾಗುತ್ತಿದೆ. ಅಲ್ಲದೆ ಈ ವೃತ್ತದ ಸಮೀಪದಲ್ಲಿಯೇ ಮದ್ಯದಂಗಡಿಯೂ ಇದ್ದು, ಕುಡಿದು ವಾಹನ ಚಲಾಯಿಸುವವರು ಏಕಾಏಕಿ ಮುಖ್ಯ ರಸ್ತೆಗೆ ಬರುತ್ತಿದ್ದಾರೆ. ಇದರಿಂದಾಗಿ ಅಪಘಾತಗಳಾಗುತ್ತಿವೆ. ಆದ್ದರಿಂದ ಸಂಬಂಧಪಟ್ಟವರು ಈ ಸರ್ಕಲ್‌ಗೆ ವಿದ್ಯುತ್ ದೀಪಗಳನ್ನು ಅಳವಡಿಸುವ ಜತೆಗೆ ಸೂಚನಾಫಲಕಗಳನ್ನೂ ಅಳವಡಿಸಬೇಕಿದೆ.

-ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ

 

andolana

Recent Posts

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

6 mins ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

26 mins ago

ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ಅಧಿಕಾರಿಗಳ ಗೈರು: ಮುಖಂಡರ ಆಕ್ರೋಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೊಜಿಸಿದ್ದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ…

43 mins ago

ಗುಂಡ್ಲುಪೇಟೆ-ಕೇರಳ ಹೆದ್ದಾರಿಯಲ್ಲಿ ಹೆಚ್ಚಿದ ಕಳ್ಳರ ಚೈಚಳಕ: ಅಲರ್ಟ್‌ ಆದ ಪೊಲೀಸರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ‌‌ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಇದಕ್ಕೆ…

49 mins ago

ಇ-ಖಾತಾ ವ್ಯವಸ್ಥೆ ಸಂಪೂರ್ಣ ಗೊಂದಲಮಯ: ಮಾಜಿ ಮೇಯರ್‌ ಶಿವಕುಮಾರ್‌ ಆರೋಪ

ಮೈಸೂರು: ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಮಾಡಿಸಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಮೇಯರ್‌ ಶಿವಕುಮಾರ್‌ ಕಿಡಿಕಾರಿದರು. ಈ…

59 mins ago

ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ…

1 hour ago